ಉದಯನಿಧಿ ಸ್ಟಾಲಿನ್ 
ದೇಶ

 ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ಉದಯನಿಧಿ ಸ್ಟಾಲಿನ್ ಹೇಳಿಕೆಯು "ಕಲಬೆರಕೆ ರಹಿತ ದ್ವೇಷದ ಭಾಷಣವಾಗಿದೆ. ಅಲ್ಲದೇ, ದೇಶದ ಶೇ. 80 ರಷ್ಟಿರುವ ಸನಾತನ ಧರ್ಮದವರ 'ಜನಾಂಗೀಯ ಹತ್ಯೆಯ ಕರೆಯಾಗಿದೆ ಎಂದು ಆರೋಪಿಸಲಾಗಿದೆ.

"ಹಿಟ್ಲರ್ ಯಹೂದಿಗಳ ವರ್ಣನೆ ಮತ್ತು ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಹೇಗೆ ಬಣ್ಣಿಸಿದ್ದಾರೆ ಎಂಬುದರ ನಡುವೆ ವಿಲಕ್ಷಣವಾದ ಹೋಲಿಕೆಯಿದೆ. ಹಿಟ್ಲರನಂತೆ ಉದಯ ನಿಧಿ ಸ್ಟಾಲಿನ್ ಕೂಡಾ  ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ನಾಜಿ ದ್ವೇಷವು ಹತ್ಯಾಕಾಂಡದಲ್ಲಿ ಹೇಗೆ ಪರಾಕಾಷ್ಠೆಯಾಯಿತು, ಸುಮಾರು 6 ಮಿಲಿಯನ್ ಯುರೋಪಿಯನ್ ಯಹೂದಿಗಳು ಮತ್ತು ಕನಿಷ್ಠ 5 ಮಿಲಿಯನ್ ಸೋವಿಯತ್ ಯುದ್ಧ ಕೈದಿಗಳು ಮತ್ತು ಇತರ ಸಂತ್ರಸ್ತರನ್ನು ಕೊಂದರು ಎಂದು ನಮಗೆ ತಿಳಿದಿದೆ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಹೇಳಲಾಗಿದೆ.

ಹೊಸದಾಗಿ ರಚನೆಗೊಂಡಿರುವ INDIA ಮೈತ್ರಿಕೂಟದ ವಿರುದ್ಧವೂ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಸ್ಟಾಲಿನ್ ಗೆ ಕಾಂಗ್ರೆಸ್ ಮತ್ತು ವಿಪಕ್ಷಗಳ ಮೈತ್ರಿಕೂಟದ  ಬೆಂಬಲವು ಅತ್ಯಂತ ಗೊಂದಲಕಾರಿಯಾಗಿದೆ' ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

IPL 2026: ಡೆಲ್ಲಿ ವಿರುದ್ಧ ಮುಗ್ಗರಿಸಿದ ರಾಜಸ್ಥಾನ, ಕಳಪೆ ಬೌಲಿಂಗ್‌, ಫೀಲ್ಡಿಂಗ್‌ ಸೋಲಿಗೆ ಕಾರಣ- ರಿಯಾನ್ ಪರಾಗ್ ಕಿಡಿ!

SCROLL FOR NEXT