ಉದಯನಿಧಿ ಸ್ಟಾಲಿನ್ 
ದೇಶ

 ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ಉದಯನಿಧಿ ಸ್ಟಾಲಿನ್ ಹೇಳಿಕೆಯು "ಕಲಬೆರಕೆ ರಹಿತ ದ್ವೇಷದ ಭಾಷಣವಾಗಿದೆ. ಅಲ್ಲದೇ, ದೇಶದ ಶೇ. 80 ರಷ್ಟಿರುವ ಸನಾತನ ಧರ್ಮದವರ 'ಜನಾಂಗೀಯ ಹತ್ಯೆಯ ಕರೆಯಾಗಿದೆ ಎಂದು ಆರೋಪಿಸಲಾಗಿದೆ.

"ಹಿಟ್ಲರ್ ಯಹೂದಿಗಳ ವರ್ಣನೆ ಮತ್ತು ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಹೇಗೆ ಬಣ್ಣಿಸಿದ್ದಾರೆ ಎಂಬುದರ ನಡುವೆ ವಿಲಕ್ಷಣವಾದ ಹೋಲಿಕೆಯಿದೆ. ಹಿಟ್ಲರನಂತೆ ಉದಯ ನಿಧಿ ಸ್ಟಾಲಿನ್ ಕೂಡಾ  ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ನಾಜಿ ದ್ವೇಷವು ಹತ್ಯಾಕಾಂಡದಲ್ಲಿ ಹೇಗೆ ಪರಾಕಾಷ್ಠೆಯಾಯಿತು, ಸುಮಾರು 6 ಮಿಲಿಯನ್ ಯುರೋಪಿಯನ್ ಯಹೂದಿಗಳು ಮತ್ತು ಕನಿಷ್ಠ 5 ಮಿಲಿಯನ್ ಸೋವಿಯತ್ ಯುದ್ಧ ಕೈದಿಗಳು ಮತ್ತು ಇತರ ಸಂತ್ರಸ್ತರನ್ನು ಕೊಂದರು ಎಂದು ನಮಗೆ ತಿಳಿದಿದೆ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಹೇಳಲಾಗಿದೆ.

ಹೊಸದಾಗಿ ರಚನೆಗೊಂಡಿರುವ INDIA ಮೈತ್ರಿಕೂಟದ ವಿರುದ್ಧವೂ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಸ್ಟಾಲಿನ್ ಗೆ ಕಾಂಗ್ರೆಸ್ ಮತ್ತು ವಿಪಕ್ಷಗಳ ಮೈತ್ರಿಕೂಟದ  ಬೆಂಬಲವು ಅತ್ಯಂತ ಗೊಂದಲಕಾರಿಯಾಗಿದೆ' ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video