ಉದಯನಿಧಿ ಸ್ಟಾಲಿನ್ 
ದೇಶ

 ಹಿಟ್ಲರ್ ಗೆ ಉದಯನಿಧಿ ಸ್ಟಾಲಿನ್ ಹೋಲಿಸಿದ ಬಿಜೆಪಿ!

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಗೆ ಬಿಜೆಪಿ ಹೋಲಿಸಿದೆ.  

ಉದಯನಿಧಿ ಸ್ಟಾಲಿನ್ ಹೇಳಿಕೆಯು "ಕಲಬೆರಕೆ ರಹಿತ ದ್ವೇಷದ ಭಾಷಣವಾಗಿದೆ. ಅಲ್ಲದೇ, ದೇಶದ ಶೇ. 80 ರಷ್ಟಿರುವ ಸನಾತನ ಧರ್ಮದವರ 'ಜನಾಂಗೀಯ ಹತ್ಯೆಯ ಕರೆಯಾಗಿದೆ ಎಂದು ಆರೋಪಿಸಲಾಗಿದೆ.

"ಹಿಟ್ಲರ್ ಯಹೂದಿಗಳ ವರ್ಣನೆ ಮತ್ತು ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಹೇಗೆ ಬಣ್ಣಿಸಿದ್ದಾರೆ ಎಂಬುದರ ನಡುವೆ ವಿಲಕ್ಷಣವಾದ ಹೋಲಿಕೆಯಿದೆ. ಹಿಟ್ಲರನಂತೆ ಉದಯ ನಿಧಿ ಸ್ಟಾಲಿನ್ ಕೂಡಾ  ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ನಾಜಿ ದ್ವೇಷವು ಹತ್ಯಾಕಾಂಡದಲ್ಲಿ ಹೇಗೆ ಪರಾಕಾಷ್ಠೆಯಾಯಿತು, ಸುಮಾರು 6 ಮಿಲಿಯನ್ ಯುರೋಪಿಯನ್ ಯಹೂದಿಗಳು ಮತ್ತು ಕನಿಷ್ಠ 5 ಮಿಲಿಯನ್ ಸೋವಿಯತ್ ಯುದ್ಧ ಕೈದಿಗಳು ಮತ್ತು ಇತರ ಸಂತ್ರಸ್ತರನ್ನು ಕೊಂದರು ಎಂದು ನಮಗೆ ತಿಳಿದಿದೆ ಎಂದು ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ ಹೇಳಲಾಗಿದೆ.

ಹೊಸದಾಗಿ ರಚನೆಗೊಂಡಿರುವ INDIA ಮೈತ್ರಿಕೂಟದ ವಿರುದ್ಧವೂ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಸ್ಟಾಲಿನ್ ಗೆ ಕಾಂಗ್ರೆಸ್ ಮತ್ತು ವಿಪಕ್ಷಗಳ ಮೈತ್ರಿಕೂಟದ  ಬೆಂಬಲವು ಅತ್ಯಂತ ಗೊಂದಲಕಾರಿಯಾಗಿದೆ' ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT