ಮಮತಾ ಬ್ಯಾನರ್ಜಿ 
ದೇಶ

ನನಗೆ ತಮಿಳುನಾಡು ಜನರ ಬಗ್ಗೆ ಅಪಾರ ಗೌರವವಿದೆ, ಆದರೆ... ಉದಯನಿಧಿ ಸನಾತನ ಧರ್ಮದ ಹೇಳಿಕೆಗೆ ಮಮತಾ ಪ್ರತಿಕ್ರಿಯೆ!

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರ ಸನಾತನ ಧರ್ಮದ ಕುರಿತು ಹೇಳಿಕೆ ದೇಶದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ಕೇಂದ್ರ ನಾಯಕರು, ಆರ್‌ಎಸ್‌ಎಸ್‌ ಮುಖಂಡರು, ಹಿಂದು ಸಂಘಟನೆಗಳು ಈ ವಿಚಾರದಲ್ಲಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿವೆ

ಕೋಲ್ಕತ್ತಾ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರ ಸನಾತನ ಧರ್ಮದ ಕುರಿತು ಹೇಳಿಕೆ ದೇಶದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ಕೇಂದ್ರ ನಾಯಕರು, ಆರ್‌ಎಸ್‌ಎಸ್‌ ಮುಖಂಡರು, ಹಿಂದು ಸಂಘಟನೆಗಳು ಈ ವಿಚಾರದಲ್ಲಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿವೆ

ಇದೇ ವೇಳೆ ಇದೀಗ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಕೂಡ ಸ್ಟಾಲಿನ್‌ ಅವರ ಸನಾತನ ಧರ್ಮದ ಹೇಳಿಕೆಗಳ ಕುರಿತು ಅಸಮ್ಮತಿ ವ್ಯಕ್ತಪಡಿಸಿದ್ದಾರೆ. “ಒಂದು ವರ್ಗದ ಜನರನ್ನು ನೋಯಿಸುವ ಯಾವುದೇ ವಿಷಯದಲ್ಲಿ ನಾವು ಭಾಗಿಯಾಗಬಾರದು” ಎಂದು ಮಮತಾ ಹೇಳಿದ್ದಾರೆ.

ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಹೇಳಿಕೆ ನೀಡಬಾರದು ,ನಾನು ಸನಾತನ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು. ನನಗೆ ತಮಿಳುನಾಡು ಜನರ ಬಗ್ಗೆ ಅಪಾರ ಗೌರವವಿದೆ. ಆದರೆ ಅವರಿಗೆ ಒಂದು ಕಳಕಳಿಯ ವಿನಂತಿ, ಪ್ರತಿ ಧರ್ಮವೂ ಅದರದೇ ಆದ ಭಾವನೆಗಳನ್ನು ಹೊಂದಿದೆ.

ಭಾರತವು ಒಂದು ಜಾತ್ಯಾತೀತ ದೇಶ. ಇದು ಪ್ರಜಾಪ್ರಭುತ್ವ ರಾಷ್ಟ್ರ ಮತ್ತು ಅದೇ ಸಮಯದಲ್ಲಿ, ವಿವಿಧತೆಯಲ್ಲಿ ಏಕತೆ ನಮ್ಮ ಮೂಲವಾಗಿದೆ. ಹಾಗಾಗಿ ನಾನು ಸನಾತನ ಧರ್ಮವನ್ನು ಗೌರವಿಸುತ್ತೇನೆ. ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಎಲ್ಲೆಂದರಲ್ಲಿ ಹೋಗುತ್ತೇವೆ. ಯಾವುದೇ ವರ್ಗಕ್ಕೆ ನೋವುಂಟು ಮಾಡುವ ಯಾವುದೇ ವಿಷಯದಲ್ಲಿ ನಾವು ಭಾಗಿಯಾಗಬಾರದg ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಖಂಡನೆ ಎಂದು ಹೇಳುವ ಬದಲು, ಪ್ರತಿಯೊಬ್ಬರಿಗೂ ನನ್ನ ವಿನಮ್ರ ವಿನಂತಿಯೆಂದರೆ, ನಾವು ಪ್ರಮುಖ ವಿಭಾಗ ಅಥವಾ ಸಣ್ಣ ವಿಭಾಗವನ್ನು ನೋಯಿಸುವ ಯಾವುದನ್ನಾದರೂ ನಾವು ಪ್ರತಿಕ್ರಿಯಿಸಬಾರದು. ನಾವು ವಿವಿಧತೆಯಲ್ಲಿ ಏಕತೆಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ಕೇವಲ ವಿರೋಧಿಸಬಾರದು ಆದರೆ ನಿರ್ಮೂಲನೆ ಮಾಡಬೇಕು” ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT