ರೇಬಿಸ್ ನಿಂದ ಮೃತಪಟ್ಟ ಬಾಲಕ 
ದೇಶ

ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ; ತಿಂಗಳ ಬಳಿಕ ರೇಬಿಸ್‍ನಿಂದ ಸಾವು

ಒಂದು ತಿಂಗಳ ಹಿಂದೆ ನಾಯಿ  ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ  ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್‍ನನ್ನು ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಂತೆಯೇ ಅಲ್ಲಿ ಚಿಕಿತ್ಸೆ ಪಡೆದು ಬುಲಂದ್‍ಶಹರ್‍ನಿಂದ ಗಾಜಿಯಾಬಾದ್‍ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ.

ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್‍ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು.

ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ.

ಕೂಡಲೇ ಶಹವಾಜ್‍ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ಆತನನ್ನು ವೈದ್ಯರು ದಾಖಲಿಸಿಕೊಳ್ಳದೆ ಔಷಧಿ ಕೊಟ್ಟು ಕಳುಹಿಸಿದ್ದಾರೆ. ಆ ಬಳಿಕ ಕಳೆದ ವಾರ ಆಯುರ್ವೇದಿಕ್ ಔಷಧಿಯ ಮೊರೆ ಹೋಗಿರುವುದಾಗಿ ಪೊಲೀಸರ ಬಳಿ ಪೋಷಕರು ತಿಳಿಸಿದ್ದಾರೆ.

ಅಂಬುಲೆನ್ಸ್‍ನಲ್ಲಿ ಗಾಜಿಯಾಬಾದ್‍ಗೆ ವಾಪಸ್ ಕರೆತರುವಾಗ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ದೂರು ದಾಖಲಾಗಿದೆ, ಮಗು ರೇಬಿಸ್‌ನಿಂದ ನರಳುತ್ತಿರುವು ವಿಡಿಯೋ ವೈರಲ್ ಆಗಿದ್ದು, ಮನಕಲಕುವಂತಿದೆ. ಇಂತಹ ಪರಿಸ್ಥಿತಿ ಯಾವ ಮಗುವಿಗೂ ಬರಬಾರದು ಎಂದು ಅನೇಕ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದು, ಜಾಗೃತಿ ವಹಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!