ಪ್ರಿಯಾಂಕಾ ಗಾಂಧಿ 
ದೇಶ

ಅದಾನಿ ಗ್ರೂಪ್‌ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ

ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. 

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಏಕೆ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, 'ಹಿಮಾಚಲ ಪ್ರದೇಶದ ಬೆಳೆಗಾರರು ಈಗಾಗಲೇ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ, ಪ್ರಧಾನಿಯವರ ಸ್ನೇಹಿತ ಅದಾನಿ ಅವರಿಗೆ ಏಕೆ ಮತ್ತಷ್ಟು ತೊಂದರೆ ನೀಡುತ್ತಿದ್ದಾರೆ' ಎಂದಿದ್ದಾರೆ.

ವರದಿಗಳನ್ನು ಉಲ್ಲೇಖಿಸಿ, ಅದಾನಿ ಗ್ರೂಪ್ ಗುಡ್ಡಗಾಡು ರಾಜ್ಯದಲ್ಲಿ ಸೇಬು ಖರೀದಿಯ ಕನಿಷ್ಠ ಬೆಲೆಯನ್ನು ಬಿಡುಗಡೆ ಮಾಡಿದ ನಂತರ, ಸೇಬು ಹಣ್ಣುಗಳ ಬಾಕ್ಸ್‌ಗಳನ್ನು ಈ ಹಿಂದಿನ ಬೆಲೆಯ ಮೂರನೇ ಒಂದು ಭಾಗಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

'ವಿಪತ್ತಿನ ಸಂದರ್ಭದಲ್ಲಿ ಇಂತಹ ಕೆಲಸವನ್ನು ಮಾಡುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸದ್ಯ ಹಿಮಾಚಲ ಪ್ರದೇಶದ ರೈತರು ಮತ್ತು ತೋಟಗಾರರಿಗೆ ಸಹಾಯದ ಅಗತ್ಯವಿರುವಾಗ, ಅವರು ಹಾನಿಗೆ ಗುರಿಯಾಗುತ್ತಿದ್ದಾರೆ' ಎಂದು ಅವರು ಹೇಳಿದರು.

'ಈ ಲೂಟಿಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಏನನ್ನೂ ಮಾಡುತ್ತಿಲ್ಲ?' ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
ಈ ಆರೋಪಗಳಿಗೆ ಅದಾನಿ ಸಮೂಹದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಹಿಮಾಚಲ ಪ್ರದೇಶವು ಕಳೆದ ತಿಂಗಳು ಭಾರಿ ಮಳೆ ಮತ್ತು ಭೂಕುಸಿತದಿಂದ ತತ್ತರಿಸಿ ಹೋಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT