ಸುಪ್ರೀಂಕೋರ್ಟ್ 
ದೇಶ

ವಿವಿಪ್ಯಾಟ್‌ನೊಂದಿಗೆ ಇವಿಎಂಗಳ ಕ್ರಾಸ್-ವೆರಿಫಿಕೇಶನ್ ಕೋರಿ ಪಿಐಎಲ್: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ

ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್‌) ಮೂಲಕ ಮತದಾರರು ಚಲಾಯಿಸಿದ ಮತಗಳ ಅಡ್ಡ ಪರಿಶೀಲನೆ ಕೋರಿ ಎನ್‌ಜಿಒ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ

ನವದೆಹಲಿ: ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್‌) ಮೂಲಕ ಮತದಾರರು ಚಲಾಯಿಸಿದ ಮತಗಳ ಅಡ್ಡ ಪರಿಶೀಲನೆ ಕೋರಿ ಎನ್‌ಜಿಒ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನವೆಂಬರ್‌ಗೆ ಮುಂದೂಡಿದೆ.

ಎನ್‌ಜಿಒ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್‌ ಭೂಷಣ್‌, ಚುನಾವಣೆ ಸಮೀಪಿಸುತ್ತಿರುವ ಕಾರಣ ತುರ್ತು ಅಗತ್ಯ ಇದೆ ಎಂದು ವಾದಿಸಿದರು. ಇದರಲ್ಲಿ ಯಾವುದೇ ತುರ್ತು ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ, ಪ್ರಕರಣವನ್ನು ಮುಂದೂಡಿದೆ.

"ಪ್ರಶಾಂತ್ ಭೂಷಣ್, ಈ ಸಮಸ್ಯೆಯನ್ನು ಎಷ್ಟು ಬಾರಿ ಎತ್ತುತ್ತಾರೆ? ಪ್ರತಿ ಆರು ತಿಂಗಳಿಗೊಮ್ಮೆ, ಈ ವಿಷಯವನ್ನು ಹೊಸದಾಗಿ ಪ್ರಸ್ತಾಪಿಸಲಾಗುತ್ತದೆ. ಇದರಲ್ಲಿ ಯಾವುದೇ ತುರ್ತು ಅಗತ್ಯ ಇಲ್ಲ. ಇದು ಸರಿಯಾದ ಸಮಯದಲ್ಲಿ ಬರಲಿ...  ವಿಚಾರಣೆಯನ್ನು ನವೆಂಬರ್ ತಿಂಗಳಲ್ಲಿ ಪಟ್ಟಿ ಮಾಡಿ’’ ಎಂದು ಪೀಠ ಹೇಳಿದೆ.

ಜುಲೈ 17 ರಂದು ಎನ್‌ಜಿಒ ಸಲ್ಲಿಸಿದ್ದ ಪಿಐಎಲ್ ಗೆ ಭಾರತೀಯ ಚುನಾವಣಾ ಆಯೋಗದ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.

ತ್ವರಿತ ಅರ್ಜಿಯಲ್ಲಿ, NGO ಮತದಾರರು ತಮ್ಮ ಮತವನ್ನು ಚಲಾಯಿಸಿದ ನಂತರ ಅದನ್ನು VVPAT ಗಳ ಮೂಲಕ ಪರಿಶೀಲಿಸಲು ಸಾಧ್ಯವಾಗುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT