ಸಾಂದರ್ಭಿಕ ಚಿತ್ರ 
ದೇಶ

ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನವದೆಹಲಿ: ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡುತ್ತಿದ್ದಾರೆ ಎಂದು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದೆ.

ಕೆಳ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ತಿರಸ್ಕರಿಸಿತ್ತು. ಈ ಸಂಬಂಧ ಜೋಸ್ ಪಾಪಚೆನ್ ಮತ್ತು ಶೀಜಾ ಅವರ ಮೇಲ್ಮನವಿಯನ್ನು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಪೀಠವು ಅಂಗೀಕರಿಸಿತು. ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜನವರಿ 24 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಮೇಲ್ಮನವಿದಾರರನ್ನು ಜೈಲಿಗೆ ಕಳುಹಿಸಲಾಯಿತು.

ಇಬ್ಬರೂ ಆರೋಪಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದರು.

ನ್ಯಾಯಮೂರ್ತಿ ಅಹ್ಮದ್ ಅವರು, 'ಬೋಧನೆ ನೀಡುವುದು, ಬೈಬಲ್ ವಿತರಣೆ, ಶಿಕ್ಷಣಕ್ಕಾಗಿ ಮಕ್ಕಳನ್ನು ಪ್ರೋತ್ಸಾಹಿಸುವುದು, ಗ್ರಾಮಸ್ಥರ ಸಭೆಗಳನ್ನು ಆಯೋಜಿಸುವುದು, ವಿವಾದ ಮಾಡದಂತೆ ಮತ್ತು ಮದ್ಯಪಾನ ಮಾಡದಂತೆ ಗ್ರಾಮಸ್ಥರಿಗೆ ಸೂಚನೆ ನೀಡುವುದು ಅಪರಾಧವಲ್ಲ ಎಂದು ಪೀಠ ಹೇಳಿದೆ.

ಪ್ರಕರಣದಲ್ಲಿ ಸಂತ್ರಸ್ತೆ ಅಥವಾ ಅವರ ಕುಟುಂಬದವರು ಮಾತ್ರ ಎಫ್‌ಐಆರ್ ದಾಖಲಿಸಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT