ಸಾಂದರ್ಭಿಕ ಚಿತ್ರ 
ದೇಶ

ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನವದೆಹಲಿ: ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡುತ್ತಿದ್ದಾರೆ ಎಂದು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದೆ.

ಕೆಳ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ತಿರಸ್ಕರಿಸಿತ್ತು. ಈ ಸಂಬಂಧ ಜೋಸ್ ಪಾಪಚೆನ್ ಮತ್ತು ಶೀಜಾ ಅವರ ಮೇಲ್ಮನವಿಯನ್ನು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಪೀಠವು ಅಂಗೀಕರಿಸಿತು. ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜನವರಿ 24 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಮೇಲ್ಮನವಿದಾರರನ್ನು ಜೈಲಿಗೆ ಕಳುಹಿಸಲಾಯಿತು.

ಇಬ್ಬರೂ ಆರೋಪಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದರು.

ನ್ಯಾಯಮೂರ್ತಿ ಅಹ್ಮದ್ ಅವರು, 'ಬೋಧನೆ ನೀಡುವುದು, ಬೈಬಲ್ ವಿತರಣೆ, ಶಿಕ್ಷಣಕ್ಕಾಗಿ ಮಕ್ಕಳನ್ನು ಪ್ರೋತ್ಸಾಹಿಸುವುದು, ಗ್ರಾಮಸ್ಥರ ಸಭೆಗಳನ್ನು ಆಯೋಜಿಸುವುದು, ವಿವಾದ ಮಾಡದಂತೆ ಮತ್ತು ಮದ್ಯಪಾನ ಮಾಡದಂತೆ ಗ್ರಾಮಸ್ಥರಿಗೆ ಸೂಚನೆ ನೀಡುವುದು ಅಪರಾಧವಲ್ಲ ಎಂದು ಪೀಠ ಹೇಳಿದೆ.

ಪ್ರಕರಣದಲ್ಲಿ ಸಂತ್ರಸ್ತೆ ಅಥವಾ ಅವರ ಕುಟುಂಬದವರು ಮಾತ್ರ ಎಫ್‌ಐಆರ್ ದಾಖಲಿಸಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT