ಸ್ಮೃತಿ ಇರಾನಿ 
ದೇಶ

ನಮ್ಮ ಧರ್ಮಕ್ಕೆ ಯಾರೂ ಸವಾಲು ಹಾಕಲು ಸಾಧ್ಯವಿಲ್ಲ: ಸ್ಮೃತಿ ಇರಾನಿ

ಸನಾತನ ಧರ್ಮ ಕುರಿತ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತೀವ್ರವಾಗಿ ತೀವ್ರವಾಗಿ ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಶ್ರೀಕೃಷ್ಣನಿಗಾಗಿ ಹೇಳುವ ಘೋಷಣೆಗಳು ಸನಾತನ ಧರ್ಮಕ್ಕೆ ಸವಾಲೆಸೆಯುವವರನ್ನು ತಲುಪುವಷ್ಟು ಜೋರಾಗಿರಬೇಕು ಎಂದಿದ್ದಾರೆ. 

ನವದೆಹಲಿ: ಸನಾತನ ಧರ್ಮ ಕುರಿತ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತೀವ್ರವಾಗಿ ತೀವ್ರವಾಗಿ ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಶ್ರೀಕೃಷ್ಣನಿಗಾಗಿ ಹೇಳುವ ಘೋಷಣೆಗಳು ಸನಾತನ ಧರ್ಮಕ್ಕೆ ಸವಾಲೆಸೆಯುವವರನ್ನು ತಲುಪುವಷ್ಟು ಜೋರಾಗಿರಬೇಕು ಎಂದಿದ್ದಾರೆ. 

ದ್ವಾರಕಾದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ಮೃತಿ ಇರಾನಿ, ಸನಾತನ ಧರ್ಮಕ್ಕೆ ಸವಾಲೆಸೆದವರಿಗೆ ನಮ್ಮ ಧ್ವನಿ ತಲುಪಬೇಕು. ಭಕ್ತರು ಬದುಕಿರುವವರೆಗೂ ನಮ್ಮ ಧರ್ಮ ಮತ್ತು ನಂಬಿಕೆಗೆ ಯಾರೂ ಸವಾಲು ಹಾಕಲು ಸಾಧ್ಯವಿಲ್ಲ ಎಂದರು. 

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಚಿವರ ಜತೆಗಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ಸನಾತನ ಧರ್ಮದ ಚರ್ಚೆಗೆ ಸಚಿವರು ತಕ್ಕ ಉತ್ತರ ನೀಡಬೇಕು ಮತ್ತು ವಿರೋಧಿಗಳನ್ನು ಎದುರಿಸಲು ಸತ್ಯಾಂಶಗಳನ್ನು ಬಳಸಬೇಕು ಎಂದು ಪ್ರಧಾನಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 

ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ "ಧಾರ್ಮಿಕ ಭಾವನೆಗಳಿಗೆ ಧಕ್ಕೆ" ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶದ ರಾಂಪುರದಲ್ಲಿ ಇಬ್ಬರು ವಕೀಲರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಉದಯನಿಧಿಯವರ ಹೇಳಿಕೆ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಡಿಎಂಕೆ ಮತ್ತು ತಮಿಳುನಾಡಿನಲ್ಲಿ ಅದರ ಪಾಲುದಾರ ಪಕ್ಷವಾದ ಕಾಂಗ್ರೆಸ್ ಸನಾತನ ಧರ್ಮದ ನಿರ್ಮೂಲನೆಯನ್ನು ಪ್ರತಿಪಾದಿಸುತ್ತಿವೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT