ಸಂಜಯ್ ರಾವತ್, ಉದಯನಿಧಿ ಸ್ಟಾಲಿನ್ 
ದೇಶ

ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಯಾರೂ ಬೆಂಬಲಿಸಲ್ಲ- ಸಂಜಯ್ ರಾವತ್

ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಯಾರೂ ಕೂಡಾ ಬೆಂಬಲಿಸಲ್ಲ ಎಂದು India ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ (ಯುಬಿಟಿ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. 

ಮುಂಬೈ: ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಯಾರೂ ಕೂಡಾ ಬೆಂಬಲಿಸಲ್ಲ ಎಂದು India ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ (ಯುಬಿಟಿ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. 

ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ನಾನು ಆ ಹೇಳಿಕೆಯನ್ನು ಕೇಳಿದ್ದೇನೆ. ಉದಯನಿಧಿ ಸ್ಟಾಲಿನ್ ಸಚಿವರಾಗಿದ್ದು, ಅಂತಹ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು. ಇದು ಡಿಎಂಕೆ ಅಥವಾ ಅವರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು ಎಂದರು. 

ಸುಮಾರು 90 ಕೋಟಿ ಹಿಂದೂಗಳು ಭಾರತದಲ್ಲಿ ವಾಸಿಸುತ್ತಿದ್ದಾರೆ. ಇತರ ಧರ್ಮದ ಜನರು ಸಹ ಈ ದೇಶದಲ್ಲಿ ವಾಸಿಸುತ್ತಿದ್ದಾರೆ, ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಸಂಜಯ್ ರಾವತ್ ಹೇಳಿದರು. 

ಸನಾತನ ಧರ್ಮದ ಹೇಳಿಕೆ ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video