ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದ ಕೈದಿ ಪರಾರಿ, ಕೆಲ ಗಂಟೆಗಳ ಬಳಿಕ ಸ್ಮಶಾನದಲ್ಲಿ ಪತ್ತೆ!

ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾದ 26 ವರ್ಷದ ವಿಚಾರಣಾಧೀನ ಕೈದಿಯೊಬ್ಬರು ಬುಧವಾರ ಪರಾರಿಯಾಗಿದ್ದರು.ಆದರೆ, ನಾಲ್ಕು ಗಂಟೆಗಳ ಹುಡುಕಾಟದ ನಂತರ ಸ್ಮಶಾನದಲ್ಲಿ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಮುಂಬೈ: ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾದ 26 ವರ್ಷದ ವಿಚಾರಣಾಧೀನ ಕೈದಿಯೊಬ್ಬರು ಬುಧವಾರ ಪರಾರಿಯಾಗಿದ್ದರು.ಆದರೆ, ನಾಲ್ಕು ಗಂಟೆಗಳ ಹುಡುಕಾಟದ ನಂತರ ಸ್ಮಶಾನದಲ್ಲಿ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಥಾಣೆ ಜಿಲ್ಲೆಯ ಭಾಯಂದರ್‌ನ ಆಟೋರಿಕ್ಷಾ ಚಾಲಕ ವಿವೇಕ್ ವಿಶ್ವನಾಥ್ ತೊರ್ಡೆ ಅವರನ್ನು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಇರಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಆತನನನ್ನು ಸೆಂಟ್ರಲ್ ಮುಂಬೈನ ಜೆಜೆ ಆಸ್ಪತ್ರೆಗೆ ಕರೆದೊಯ್ದದ್ದಾಗ ಈ ಘಟನೆ ನಡೆದಿದೆ ಎಂದು ಎಂದು ಪೊಲೀಸ್ ಉಪ ಕಮಿಷನರ್ ಜಯಂತ್ ಬಜ್ಬಲೆ ತಿಳಿಸಿದ್ದಾರೆ. 

ತೊರ್ಡೆ ಅವರು ನವಘರ್ ಪೊಲೀಸ್ ಠಾಣಾ ವ್ಯಾಪ್ತಿಯ ಇಂದಿರಾ ನಗರ ಕೊಳೆಗೇರಿ ನಿವಾಸಿಯಾಗಿದ್ದಾನೆ. ನಾಲ್ಕು ಗಂಟೆಗಳ ಹುಡುಕಾಟದ ನಂತರ, ಇಂದಿರಾ ನಗರದ ಸ್ಲಮ್‌ನಲ್ಲಿರುವ ಸ್ಮಶಾನದಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಯಿತು. ನಂತರ  ಅಲ್ಲಿಂದ ಆತನನ್ನು ಬಂಧಿಸಿ ಜೆಜೆ ಮಾರ್ಗ್ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT