ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ 
ದೇಶ

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ 

ರಾಜ್ಯಪಾಲರನ್ನು ಭೇಟಿ ಮಾಡಿದ ತಮಿಳುನಾಡು ಬಿಜೆಪಿ: ಸಂಪುಟದಿಂದ ಉದಯನಿಧಿ ವಜಾಗೊಳಿಸಲು ಆಗ್ರಹ 

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿದ್ದಾರೆ. 

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕೆಂದು ರಾಜ್ಯಪಾಲ ಆರ್ ಎನ್ ರವಿ ಅವರಿಗೆ ತಮಿಳುನಾಡು ಬಿಜೆಪಿ ನಿಯೋಗ ಮನವಿ ಮಾಡಿದೆ.  ಇದೇ ವೇಳೆ, ಸನಾತನ ಧರ್ಮ ನಿರ್ಮೂಲನೆಗೆ ಸಂಬಂಧಿಸಿದ ಕಾನ್ಫರೆನ್ಸ್ ನಲ್ಲಿ  ಸಚಿವ ಪಿಕೆ ಶೇಖರ್ ಬಾಬು ಭಾಗಿಯಾಗಿದ್ದು ಪ್ರಮಾಣ ವಚನಕ್ಕೆ ವಿರುದ್ಧವಾಗಿದ್ದು ಅವರನ್ನೂ ಸಂಪುಟದಿಂದ ವಜಾಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದರೆ ಅದು ಹಿಂದೂ ಧರ್ಮದ ನಿರ್ಮೂಲನೆ ಎಂದಾಗುತ್ತದೆ. ಈ ರೀತಿಯ ಹೇಳಿಕೆ ನೀಡಿರುವ ಉದಯನಿಧಿ ಸ್ಟ್ಯಾಲಿನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಬಿಜೆಪಿ ನಾಯಕ ಕರು ನಾಗರಾಜನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT