ಸಾಂದರ್ಭಿಕ ಚಿತ್ರ 
ದೇಶ

ವಿಮಾನದಲ್ಲೇ ಗಗನ ಸಖಿಗೆ ಬಾಂಗ್ಲಾ ಪ್ರಜೆಯಿಂದ ಲೈಂಗಿಕ ಕಿರುಕಳ; ತಬ್ಬಿಕೊಳ್ಳಲು ಯತ್ನ, ಮರ್ಮಾಂಗ ತೋರಿಸಿ ವಿಕೃತಿ

ಪ್ರಯಾಣಿಕರಿಂದ ತುಂಬಿದ ವಿಮಾನದಲ್ಲೇ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದ್ದು, ಬಾಂಗ್ಲಾದೇಶ ಪ್ರಜೆಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ: ಪ್ರಯಾಣಿಕರಿಂದ ತುಂಬಿದ ವಿಮಾನದಲ್ಲೇ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದ್ದು, ಬಾಂಗ್ಲಾದೇಶ ಪ್ರಜೆಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.

ಗುರುವಾರ ಮುಂಬೈಗೆ ತೆರಳುತ್ತಿದ್ದ ವಿಸ್ತಾರ ವಿಮಾನಯಾನ ಸಂಸ್ಥೆಯ ವಿಮಾನದಲ್ಲಿ 22 ವರ್ಷದ ಗಗನಸಖಿಗೆ ಪ್ರಯಾಣಿಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಆಕೆಯನ್ನು ಬಲವಂತವಾಗಿ ತಬ್ಬಿಕೊಂಡಿದ್ದು ಮಾತ್ರವಲ್ಲದೇ ಆಕೆಯ ಮುಂದೆಯೇ ಮರ್ಮಾಂಗ ತೋರಿಸಿ ವಿಕೃತಿ ತೋರಿಸಿ ವಿಕೃತಿ ಮೆರೆದಿದ್ದಾರೆ. ಅಲ್ಲದೆ ಹಸ್ತಮೈಥುನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಪ್ರಸ್ತುತ 22 ವರ್ಷದ ಗಗನಸಖಿ ನೀಡಿರುವ ದೂರಿನ ಮೇರೆಗೆ 30 ವರ್ಷದ ಬಾಂಗ್ಲಾದೇಶ ಪ್ರಜೆಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ದುಲಾಲ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಲಗಳ ಪ್ರಕಾರ ಗುರುವಾರ ಮುಂಜಾನೆ 4.25ಕ್ಕೆ ವಿಸ್ತಾರಾ ವಿಮಾನವು ಮುಂಬೈನಲ್ಲಿ ಇಳಿಯಲು 30 ನಿಮಿಷಗಳ ಮೊದಲು ಈ ಘಟನೆ ನಡೆದಿದೆ. ಆರೋಪಿ ದುಲಾಲ್ ಫ್ಲೈಟ್ ಅಟೆಂಡೆಂಟ್‌ಗೆ ಕಿರುಕುಳ ನೀಡಿದ್ದಾನೆ ಎಂದು ವರದಿಯಾಗಿದೆ. ಈ ವೇಳೆ ಇತರ ಪ್ರಯಾಣಿಕರು ಸಿಬ್ಬಂದಿಯ ಪರವಾಗಿ ಮಧ್ಯಪ್ರವೇಶಿಸಿದಾಗ ಅವರೊಂದಿಗೂ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಹೇಳಲಾಗಿದೆ.

30 ವರ್ಷದ ಬಾಂಗ್ಲಾದೇಶಿ ಪ್ರಜೆ ದುಲಾಲ್ ಮಸ್ಕತ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು, ಅಲ್ಲಿಂದ ಅವರು ಢಾಕಾಕ್ಕೆ ಸಂಪರ್ಕ ವಿಮಾನವನ್ನು ಹತ್ತಬೇಕಿತ್ತು. ಆದರೆ ಇದೀಗ ಆತ ಸಹರ್ ಪೊಲೀಸರ ಅತಿಥಿಯಾಗಿದ್ದಾನೆ.

ಮಾನಸಿಕ ಅಸ್ವಸ್ಥ ಎಂದ ವಕೀಲರು
ಇನ್ನು ಆರೋಪಿ ದುಲಾಲ್ ನನ್ನು ಗುರುವಾರ ಅಂಧೇರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆತನ ಪರ ಹಾಜರಿದ್ದ ಅವರ ಪರ ವಕೀಲ ದುಲಾಲ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಅವರಿಗೆ ಇಂಗ್ಲಿಷ್ ಅಥವಾ ಹಿಂದಿ ಭಾಷೆ ಬರುವುದಿಲ್ಲ ಎಂದು ವಾದಿಸಿದ್ದಾರೆ. ಅದಾಗ್ಯೂ ನ್ಯಾಯಾಲಯ ಆತನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಘಟನೆಯ ಬಗ್ಗೆ ಬಾಂಗ್ಲಾದೇಶ ದೂತಾವಾಸಕ್ಕೂ ಮಾಹಿತಿ ನೀಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT