ಅಮೆರಿಕ ಅಧ್ಯಕ್ಷ ಜೋ-ಬೈಡನ್ ಅವರೊಂದಿಗೆ ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

ಜಿ-20 ಶೃಂಗಸಭೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ 15ಕ್ಕೂ ಹೆಚ್ಚು ದ್ವೀಪಕ್ಷೀಯ ಸಭೆ

ಜಿ-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತಿತರ ದೇಶಗಳ ನಾಯಕರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ. ಕೆಲ ರಾಷ್ಟ್ರಗಳ ನಾಯಕರು ಈಗಾಗಲೇ  ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. 

ನವದೆಹಲಿ: ಜಿ-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತಿತರ ದೇಶಗಳ ನಾಯಕರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ. ಕೆಲ ರಾಷ್ಟ್ರಗಳ ನಾಯಕರು ಈಗಾಗಲೇ  ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. 

ಶೃಂಗಸಭೆ ಹಿನ್ನೆಲೆಯಲ್ಲಿ ನವದೆಹಲಿ ಭಿತ್ತಿಚಿತ್ರಗಳು, ಬ್ಯಾನರ್ ಗಳು, ಕಾರಂಜಿಗಳು ಮತ್ತು ಬೀದಿಯಲ್ಲಿ ಸಸ್ಯಗಳಿಂದ ಅಲಂಕರಿಸಲ್ಪಟ್ಟಿದೆ ಮತ್ತು ಪ್ರಧಾನ  ಕಾರ್ಯಕ್ರಮ ಆಯೋಜಿಸಿರುವ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದ ಮುಂದೆ ನಟರಾಜನ ದೈತ್ಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ದೆಹಲಿಯ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ತುರ್ತು ಸೇವೆಗಳಿಗೆ ಹೊರತುಪಡಿಸಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 

ಶೃಂಗಸಭೆ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ವಿಶ್ವ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಇಂದು ಅಮೆರಿಕಾ, ಮಾರಿಷಸ್, ಬಾಂಗ್ಲಾದೇಶ ಹಾಗೂ ಯುಎಸ್ ಎ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಾಳೆ ಯುಕೆ, ಜಪಾನ್, ಜರ್ಮನಿ ಮತ್ತು ಇಟಲಿ ಮತ್ತು  ನಾಡಿದ್ದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಭೋಜನಕೂಟದೊಂದಿಗೆ ಸಭೆಯನ್ನು ಪ್ರಧಾನಿ ಮೋದಿ ನಡೆಸಲಿದ್ದಾರೆ.

ಉಳಿದಂತೆ  ಕೆನಡಾ, ಕೊಮೊರೊಸ್, ತುರ್ಕಿಯೆ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ನಾಯಕರೊಂದಿಗೂ ಪ್ರಧಾನಿ ಮೋದಿ ದ್ವೀಪಕ್ಷೀಯ ಸಭೆ ನಡೆಸಲಿದ್ದು, ಹಲವು ಜಾಗತಿಕ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT