ಪ್ರಧಾನಿ ಮೋದಿ 
ದೇಶ

ಭಾರತದ G20 ಅಧ್ಯಕ್ಷತೆ ಎಲ್ಲವನ್ನೂ ಒಳಗೊಳ್ಳುವ, ನಿರ್ಣಾಯಕ ಮತ್ತು ಕಾರ್ಯ-ಆಧಾರಿತ: ಪ್ರಧಾನಿ ಮೋದಿ

ಇಂದು ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ಭಾರತ್ ಮಂಟಪ್ ವೇದಿಕೆಯಲ್ಲಿ ಜಿ20 ಶೃಂಗಸಭೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ಆರಂಭಕ್ಕೆ ಮುನ್ನ, G 20 'ಮಾನವ-ಕೇಂದ್ರಿತ' ಮತ್ತು ಅಂತರ್ಗತ ಅಭಿವೃದ್ಧಿಯತ್ತ ಹೊಸ ಮಾರ್ಗವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ನವ ದೆಹಲಿ: ಇಂದು ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ಭಾರತ್ ಮಂಟಪ್ ವೇದಿಕೆಯಲ್ಲಿ ಜಿ20 ಶೃಂಗಸಭೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ಆರಂಭಕ್ಕೆ ಮುನ್ನ, G 20 'ಮಾನವ-ಕೇಂದ್ರಿತ' ಮತ್ತು ಅಂತರ್ಗತ ಅಭಿವೃದ್ಧಿಯತ್ತ ಹೊಸ ಮಾರ್ಗವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಕಳೆದ ರಾತ್ರಿ ದ್ವಿಪಕ್ಷೀಯ ಚರ್ಚೆಗಾಗಿ ಯುಎಸ್ ಅಧ್ಯಕ್ಷರು ಮತ್ತು ಇತರ ವಿದೇಶಿ ಗಣ್ಯರೊಂದಿಗಿನ ಭೇಟಿಗೆ ಕೆಲವೇ ಗಂಟೆಗಳ ಮೊದಲು, ಮೋದಿ ಅವರು 'ಒಂದು ಭೂಮಿ, ಒಂದು ಕುಟುಂಬ' ಮತ್ತು 'ಒಂದು ಭವಿಷ್ಯ' ಕುರಿತು ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡ ಇಂದಿನ ಅಧಿವೇಶನಗಳ ಅಧ್ಯಕ್ಷತೆ ವಹಿಸಲಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. 

ನಿನ್ನೆ ಅಪರಾಹ್ನ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಭಾರತ ಸಂಜಾತೆ ಪತ್ನಿ ಅಕ್ಷತಾ ಸುನಕ್ ಅವರೊಂದಿಗೆ ಆಗಮಿಸಿದ ಸ್ವಲ್ಪ ಸಮಯದ ನಂತರ, ಮೋದಿ ಅವರು ಉತ್ತಮ ಗ್ರಹದ ಕಡೆಗೆ ಸಹಕಾರದಿಂದ ಕೆಲಸ ಮಾಡಲು ಫಲಪ್ರದ ಶೃಂಗಸಭೆಯ ನಿರೀಕ್ಷೆಯನ್ನು ಹೊಂದಿದ್ದೇನೆ ಎಂದು ಹೇಳಿದ್ದರು.

ತರುವಾಯ ಅವರು, ಭಾರತವು ಸೆಪ್ಟೆಂಬರ್ 9 ರಂದು ದೆಹಲಿಯ ಭಾರತ್ ಮಂಟಪದಲ್ಲಿ 18ನೇ G20 ಶೃಂಗಸಭೆಯನ್ನು ಆಯೋಜಿಸಲು ಸಂತೋಷವಾಗಿದೆ. ಇದು ಭಾರತ ಆಯೋಜಿಸಿದ ಮೊದಲ G20 ಶೃಂಗಸಭೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ವಿಶ್ವ ನಾಯಕರೊಂದಿಗೆ ಫಲಪ್ರದ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದರು. 

ಮಹಾತ್ಮ ಗಾಂಧಿಯವರ ಧ್ಯೇಯೋದ್ದೇಶಗಳನ್ನು ಉಲ್ಲೇಖಿಸಿದ ಪ್ರಧಾನಿ, ಭಾರತವು ಪ್ರಗತಿಗೆ ಮಾನವ ಕೇಂದ್ರಿತ ವಿಧಾನಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಹಿಂದುಳಿದವರಿಗೆ ಸೇವೆ ಸಲ್ಲಿಸುವ ಗಾಂಧಿಯವರ ಧ್ಯೇಯವನ್ನು ಅನುಕರಿಸುವುದು ಅತ್ಯಾವಶ್ಯಕವಾಗಿದೆ. ಶೃಂಗಸಭೆಯಲ್ಲಿ ಬಲವಾದ, ಸುಸ್ಥಿರ, ಅಂತರ್ಗತ ಮತ್ತು ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗಳ ನಡೆಯಲಿವೆ ಎಂದಿದ್ದಾರೆ.

"ಸುಸ್ಥಿರ ಅಭಿವೃದ್ಧಿ ಗುರಿಗಳು, ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಅಭಿವೃದ್ಧಿ ಒಪ್ಪಂದ ಮತ್ತು 21 ನೇ ಶತಮಾನಕ್ಕೆ ಬಹುಪಕ್ಷೀಯ ಸಂಸ್ಥೆಗಳನ್ನು ಬಲಪಡಿಸುವತ್ತ ಪ್ರಗತಿಯನ್ನು ವೇಗಗೊಳಿಸುವ ಗುರಿ ಹೊಂದಿದ್ದೇವೆ" ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಒಟ್ಟಾರೆಯಾಗಿ, ಲಿಂಗ ಸಮಾನತೆ, ಮಹಿಳೆಯರ ಸಬಲೀಕರಣವನ್ನು ಹೆಚ್ಚಿಸಲು, ವಿಶ್ವ ಶಾಂತಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT