ಜೈರಾಮ್ ರಮೇಶ್ 
ದೇಶ

'ಒನ್ ಮ್ಯಾನ್, ಒನ್ ಗವರ್ನಮೆಂಟ್, ಒನ್ ಬ್ಯುಸಿನೆಸ್ ಗ್ರೂಪ್': ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಜಿ20 ಥೀಮ್. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು "ಒಬ್ಬ ವ್ಯಕ್ತಿ, ಒಂದು ಸರಕಾರ, ಒಂದು ಉದ್ಯಮ ಸಮೂಹದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಟೀಕಿಸಿದೆ. 

ನವದೆಹಲಿ: ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಜಿ20 ಥೀಮ್. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು "ಒಬ್ಬ ವ್ಯಕ್ತಿ, ಒಂದು ಸರಕಾರ, ಒಂದು ಉದ್ಯಮ ಸಮೂಹದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಟೀಕಿಸಿದೆ. 

ಯುಎಸ್ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಉದ್ಯಮಿ ಗೌತಮ್ ಅದಾನಿ ಸಮೂಹದ ಉದ್ಯಮಗಳ ಅಕ್ರಮ ವ್ಯವಹಾರ ಹಾಗೂ ತಿರುಚಿದ ಷೇರು ಮಾರುಕಟ್ಟೆ ದರಗಳನ್ನು ಕಾಂಗ್ರೆಸ್ ಪ್ರಶ್ನಿಸುತ್ತಿದ್ದು, ಹಿಂಡೆನ್‌ಬರ್ಗ್ ವರದಿಯಲ್ಲಿ ಮಾಡಲಾದ ಎಲ್ಲಾ ಆರೋಪಗಳನ್ನು ಅದಾನಿ ಗ್ರೂಪ್ ನಿರಾಕರಿಸಿದೆ ಮತ್ತು ತನ್ನ ಕಡೆಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಹೇಳಿಕೊಂಡಿದೆ.

ಜಿ20 ಶೃಂಗಸಭೆ ದೆಹಲಿಯಲ್ಲಿ ಆರಂಭವಾಗುತ್ತಿದ್ದಂತೆ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಕಡಿವಾಣ ಹಾಕಲು ಹಿಂದಿನ ಅಂತಾರಾಷ್ಟ್ರೀಯ ಸಮುದಾಯದ ಸಭೆಗಳಲ್ಲಿ ಮೋದಿ ನೀಡಿದ ಹಲವು ಉಪದೇಶಗಳನ್ನು ನೆನಪಿಸಿಕೊಳ್ಳುವುದು ಯೋಗ್ಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2014 ರ ಬ್ರಿಸ್ಬೇನ್ ಜಿ- 20 ಸಭೆಯಲ್ಲಿ ಆರ್ಥಿಕ ಅಪರಾಧಿಗಳ ಪತ್ತೆ ಮತ್ತು ಭ್ರಷ್ಟರ ಕಾರ್ಯಗಳನ್ನು ಮರೆಮಾಚುವ ಬ್ಯಾಂಕಿಂಗ್ ನೀತಿ ಮತ್ತು ಅಂತಾರಾಷ್ಟ್ರೀಯ ನಿಯಮಗಳನ್ನು ರದ್ದುಗೊಳಿಸಲು ಅಂತಾರಾಷ್ಟ್ರೀಯ ಸಹಕಾರವನ್ನು ಕೋರಿದ್ದ ಪ್ರಧಾನಿ ಮೋದಿ, 2018 ರ ಬ್ಯೂನಸ್ ಐರಿಸ್ ಜಿ 20 ಶೃಂಗಸಭೆಯಲ್ಲಿ ಪರಾರಿಯಾಗಿರುವ ಆರ್ಥಿಕ ಅಪರಾಧಗಳ ವಿರುದ್ಧ ಕ್ರಮ ಮತ್ತು ಆಸ್ತಿ ಮರುಪಡೆಯುವಿಕೆಗಾಗಿ ಒಂಬತ್ತು ಅಂಶಗಳ ಕಾರ್ಯಸೂಚಿಯನ್ನು ಮಂಡಿಸಿದರು ಎಂದು ರಮೇಶ್ ಹೇಳಿದ್ದಾರೆ.

ಜಿ-20  ಜಾಗತಿಕ ಸಮಸ್ಯೆಗಳನ್ನು ಸಹಕಾರಿ ರೀತಿಯಲ್ಲಿ ನಿಭಾಯಿಸುವ ಗುರಿಯನ್ನು ಹೊಂದಿರುವ ಪ್ರಮುಖ ವಿಶ್ವ ಆರ್ಥಿಕತೆಗಳ ಉತ್ಪಾದಕ ಸಭೆಯಾಗಲು ಉದ್ದೇಶಿಸಲಾಗಿದೆ. "ಅಧ್ಯಕ್ಷ ಪುಟಿನ್ ದೂರ ಉಳಿದಿರಬಹುದು, ಆದರೆ ಕೊಳಗೇರಿಯನ್ನು ಧ್ವಂಸಗೊಳಿಸಿ ಅಥವಾ ಅವುಗಳ ಮೇಲೆ ಕವರ್ ಹಾಕಿ ಗಣ್ಯರಿಗೆ ತೋರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಭಾರದಂತೆ ವಿಶ್ವ ನಾಯಕರನ್ನು ಒಟ್ಟುಗೂಡಿಸಲಾಗಿದೆ. 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಜಿ-20 ಥೀಮ್ ಆದರೆ, ಇದು ನಿಜವಾಗಿ 'ಒಬ್ಬ ಮನುಷ್ಯ, ಒಂದು ಸರ್ಕಾರ, ಒಂದು ಉದ್ಯಮ ಗುಂಪು' ಎಂದು ನಂಬಿರುವಂತೆ ತೋರುತ್ತಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT