ಆಹಾರ ಪದಾರ್ಥಗಳ ಬೆಲೆ ಇನ್ನಷ್ಟು ಹೆಚ್ಚಳ ಸಾಧ್ಯತೆ 
ದೇಶ

ಕೈಕೊಟ್ಟ ಮುಂಗಾರು: ಆಹಾರ ಪದಾರ್ಥಗಳ ಬೆಲೆ ಇನ್ನಷ್ಟು ಹೆಚ್ಚಳ ಸಾಧ್ಯತೆ 

ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ದೇಶಾದ್ಯಂತ ಹಣದುಬ್ಬರ ಪರಿಸ್ಥಿತಿ ಮುಂದಿನ ದಿನಗಳಲ್ಲಿ ತೀವ್ರಗೊಳ್ಳಲಿದೆ ಎಂದು ಬ್ಯಾಂಕ್ ಆಫ್ ಬರೋಡಾ ವರದಿ ಮಾಡಿದೆ.

ನವದೆಹಲಿ: ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ದೇಶಾದ್ಯಂತ ಹಣದುಬ್ಬರ ಪರಿಸ್ಥಿತಿ ಮುಂದಿನ ದಿನಗಳಲ್ಲಿ ತೀವ್ರಗೊಳ್ಳಲಿದೆ ಎಂದು ಬ್ಯಾಂಕ್ ಆಫ್ ಬರೋಡಾ ವರದಿ ಮಾಡಿದೆ.

"ದೇಶಕ್ಕೆ ಒಟ್ಟಾರೆ ಮಳೆಯು ದೀರ್ಘಾವಧಿಯ ಸರಾಸರಿಗಿಂತ 11% ನಷ್ಟು ಕೊರತೆಯ ವಲಯಕ್ಕೆ ಕುಸಿದಿದೆ" ಎಂದು ವರದಿ ಹೇಳಿದೆ. ಎಲ್ ನಿನೊ ವಿದ್ಯಮಾನ ಸಮುದ್ರದ ಮೇಲ್ಮೈ ತಾಪಮಾನದ ಉಷ್ಣತೆಯೊಂದಿಗೆ ಸಂಬಂಧಿಸಿದೆ, ಆಗಸ್ಟ್‌ನಲ್ಲಿ ಆಗಾಗ್ಗೆ ವಿರಾಮಗಳೊಂದಿಗೆ ಮಳೆಯ ಅಸಮಾನ ಹಂಚಿಕೆಗೆ ಇದೇ ಕಾರಣವಾಗಿದೆ ಎಂದು ವರದಿ ಹೇಳಿದೆ.

ಅನಿಯಮಿತ ಮಳೆ ಮತ್ತು ವಿವಿಧ ಪ್ರದೇಶಗಳಲ್ಲಿನ ಮಳೆಯ ಹಂಚಿಕೆಯಿಂದಾಗಿ ಖಾರಿಫ್ ಬಿತ್ತನೆಯು ಕಳೆದ ವರ್ಷಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಇದು ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ಹಣದುಬ್ಬರಕ್ಕೆ ಕಾರಣವಾಗಲಿದೆ ಎಂದು ಬ್ಯಾಂಕ್ ಆಫ್ ಬರೋಡಾದ ಅರ್ಥಶಾಸ್ತ್ರಜ್ಞ ಜಾಹ್ನವಿ ಪ್ರಭಾಕರ್ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಈ ನಡುವೆ ಕಳೆದ ವರ್ಷ 212 ಗಿಗಾ ವ್ಯಾಟ್ ಗರಿಷ್ಠ ಬೇಡಿಕೆಗೆ ಹೋಲಿಸಿದರೆ ದೇಶವು 241 ಗಿಗಾ ವ್ಯಾಟ್ ವಿದ್ಯುತ್ ಬೇಡಿಕೆಯ ದಾಖಲೆಯ ಮಟ್ಟವನ್ನು ತಲುಪಿದೆ. ಕಳೆದ ವರ್ಷ ಸೆಪ್ಟೆಂಬರ್ ಗೆ ಹೋಲಿಕೆ ಮಾಡಿದರೆ, ಖಾರೀಫ್ ಬೆಳೆ ಬಿತ್ತನೆ ಶೇ.0.4 ರಷ್ಟು (1,073.2 ಲಕ್ಷದಿಂದ 1,077.8 ಲಕ್ಷ ಹೆಕ್ಟೇರ್ ಗಳಿಗೆ) ಸುಧಾರಣೆಯಾಗಿದೆ. 

ಆದರೆ ಸಕಾರಾತ್ಮಕ ದೃಷ್ಟಿಯೆಂದರೆ, ಭತ್ತದ ಬೆಳೆ ವಿಸ್ತೀರ್ಣವು ಕಳೆದ ವರ್ಷಕ್ಕಿಂತ 3.7% ರಷ್ಟು ಸುಧಾರಿಸಿದೆ ಎಂದು ಬ್ಯಾಂಕ್ ಆಫ್ ಬರೋಡಾ ವರದಿ ಹೇಳಿದೆ. ಬಜ್ರಾ (0.6%) ಮತ್ತು ಮೆಕ್ಕೆಜೋಳದಲ್ಲಿ (2.7%) ಹೆಚ್ಚಿನ ಬಿತ್ತನೆಯಾಗಿದ್ದರೆ, ಕಬ್ಬು ಬೆಳೆ 2022 ರಿಂದ ತೀವ್ರ ಏರಿಕೆ ಕಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT