ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು

ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರೆಲ್ಲರೂ, ಧೋಲಾಪುರ ಜಿಲ್ಲೆಯ ಸಿಕರ್‌ನಲ್ಲಿರುವ ಶ್ಯಾಮ್‌ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದರು. ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 2 ಗೂಳಿಗಳ ಶವಗಳೂ ಕೂಡ ಪತ್ತೆಯಾಗಿದ್ದು, ಗೂಳಿಗಳ ಕಾಳಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಕ್ಕಿಯಾದ ಪರಿಣಾಮ ಕಾರು ಪರಿಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮೃತರನ್ನು ಹರೇಂದ್ರ ಸಿಂಗ್ (32), ಅವರ ಪತ್ನಿ ಮಮತಾ (30), ಅವರ ಮಗಳು ಜಾನ್ವಿ (6), ಮಮತಾ ಅವರ ಸಹೋದರಿ ಸುಧಾ (35), ಅವರ ಪತಿ ಸಂತೋಷ್ (37) ಮತ್ತು ಅವರ ಮಗ ಅನುಜ್ (5) ಎಂದು ಗುರುತಿಸಲಾಗಿದೆ.

ಪೊಲೀಸ್‌ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತ ಪಟ್ಟಿದ್ದರು

ಇಬ್ಬರು ಅಪ್ರಾಪ್ತರು ಗಾಯಗಳೊಂದಿಗೆ ಪಾರಾಗಿದ್ದು, ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

ಬಾಂಗ್ಲಾದೇಶದಲ್ಲಿ ಮತ್ತೊಬ್ಬ 'ಹಿಂದೂ' ಗುಂಡೇಟಿಗೆ ಬಲಿ: ಎರಡು ವಾರಗಳಲ್ಲಿ ಮೂರನೇ ಕೊಲೆ!

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ED ಪ್ರಕರಣದಲ್ಲಿ ಜಾಮೀನು ಮಂಜೂರು

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ

ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಬಯೋಕಾನ್ ಉದ್ಯೋಗಿ ಆತ್ಮಹತ್ಯೆ!

SCROLL FOR NEXT