ಮಮತಾ ಬ್ಯಾನರ್ಜಿ 
ದೇಶ

ಜಿ-20 ಸಭೆಗೆ ಮಮತಾ ಹೋಗಿದ್ದೇಕೆ?; ಗೊಂದಲದಲ್ಲಿ ಕಾಂಗ್ರೆಸ್!

ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 

ಜಿ-20 ಸಭೆಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ನಾಯಕರು ಭಾಗಿಯಾಗಿದ್ದರು. 

ಮಮತಾ ಬ್ಯಾನರ್ಜಿ ಅವರು ಜಿ-20 ಔತಣಕೂಟದಲ್ಲಿ ಭಾಗಿಯಾಗಿರುವುದರಿಂದ ಮೋದಿ ಸರ್ಕಾರದ ವಿರುದ್ಧದ ಅವರ ನಿಲುವು ದುರ್ಬಲವಾಗುವುದಿಲ್ಲವೇ? ಎಂದು ಅಧೀರ್ ರಂಜನ್ ಚೌಧರಿ ಪ್ರಶ್ನಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಜಿ-20 ಔತಣಕೂಟದಲ್ಲಿ ಭಾಗಿಯಾಗುವುದಕ್ಕೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಿಗೆ ಬೇರೆ ಯಾವುದಾದರೂ ಕಾರಣ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್ ನ ಪ್ರಶ್ನೆಗೆ ತಿರುಗೇಟು ನೀಡಿರುವ ಟಿಎಂಸಿ, ಮಮತಾ ಬ್ಯಾನರ್ಜಿ, ಬಿಜೆಪಿ ವಿರೋಧಿ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರಾಗಿದ್ದಾರೆ. ಕಾಂಗ್ರೆಸ್ ನಾಯಕರು ಆಡಳಿತಾತ್ಮಕ ದೃಷ್ಟಿಯಿಂದ ಪಾಲಿಸಬೇಕಾದ ಶಿಷ್ಟಾಚಾರದ ಬಗ್ಗೆ ಮಮತಾ ಬ್ಯಾನರ್ಜಿಗೆ ಉಪನ್ಯಾಸ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ