ಮಮತಾ ಬ್ಯಾನರ್ಜಿ 
ದೇಶ

ಜಿ-20 ಸಭೆಗೆ ಮಮತಾ ಹೋಗಿದ್ದೇಕೆ?; ಗೊಂದಲದಲ್ಲಿ ಕಾಂಗ್ರೆಸ್!

ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 

ಜಿ-20 ಸಭೆಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ನಾಯಕರು ಭಾಗಿಯಾಗಿದ್ದರು. 

ಮಮತಾ ಬ್ಯಾನರ್ಜಿ ಅವರು ಜಿ-20 ಔತಣಕೂಟದಲ್ಲಿ ಭಾಗಿಯಾಗಿರುವುದರಿಂದ ಮೋದಿ ಸರ್ಕಾರದ ವಿರುದ್ಧದ ಅವರ ನಿಲುವು ದುರ್ಬಲವಾಗುವುದಿಲ್ಲವೇ? ಎಂದು ಅಧೀರ್ ರಂಜನ್ ಚೌಧರಿ ಪ್ರಶ್ನಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಜಿ-20 ಔತಣಕೂಟದಲ್ಲಿ ಭಾಗಿಯಾಗುವುದಕ್ಕೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಿಗೆ ಬೇರೆ ಯಾವುದಾದರೂ ಕಾರಣ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್ ನ ಪ್ರಶ್ನೆಗೆ ತಿರುಗೇಟು ನೀಡಿರುವ ಟಿಎಂಸಿ, ಮಮತಾ ಬ್ಯಾನರ್ಜಿ, ಬಿಜೆಪಿ ವಿರೋಧಿ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರಾಗಿದ್ದಾರೆ. ಕಾಂಗ್ರೆಸ್ ನಾಯಕರು ಆಡಳಿತಾತ್ಮಕ ದೃಷ್ಟಿಯಿಂದ ಪಾಲಿಸಬೇಕಾದ ಶಿಷ್ಟಾಚಾರದ ಬಗ್ಗೆ ಮಮತಾ ಬ್ಯಾನರ್ಜಿಗೆ ಉಪನ್ಯಾಸ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT