ಸೌದಿ ರಾಜಕುಮಾರನ ಜೊತೆಗೆ ಪ್ರಧಾನಿ ಮೋದಿ 
ದೇಶ

ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?

ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ದ್ವಿಪಕ್ಷೀಯ ಸಭೆ ನಡೆಸಿದರು.

ನವದೆಹಲಿ: ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ದ್ವಿಪಕ್ಷೀಯ ಸಭೆ ನಡೆಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. 

ಉಭಯ ನಾಯಕರು ಕಾರ್ಯತಂತ್ರ ಪಾಲುದಾರಿಕೆ ಮಂಡಳಿಯ ಮೊದಲ ನಾಯಕರ ಸಭೆಯ ಸಹ-ಅಧ್ಯಕ್ಷರಾಗಿದ್ದು, ರಾಜಕೀಯ, ಭದ್ರತೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಹಕಾರ ಸಮಿತಿ, ಆರ್ಥಿಕತೆ ಮತ್ತು ಹೂಡಿಕೆ ಸಹಕಾರ ಸಮಿತಿಯ ಪ್ರಗತಿ ಪರಾಮರ್ಶೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.  ರಾಜಕೀಯ, ಭದ್ರತೆ, ರಕ್ಷಣೆ, ವ್ಯಾಪಾರ ಮತ್ತು ಆರ್ಥಿಕತೆ. ಸಾಂಸ್ಕೃತಿಕ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಅಂಶಗಳನ್ನು ಉಭಯ ನಾಯಕರು ಚರ್ಚಿಸಿದರು. ಸೌದಿ ರಾಜಕುಮಾರ್ ಜೊತೆಗೆ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಸಭೆಯಲ್ಲಿ ಪಾಲ್ಗೊಂಡಿದ್ದಾಗಿ ಮಾಹಿತಿ ನೀಡಲಾಗಿದೆ.

ಪ್ರಧಾನಿ ಮೋದಿ ಭೇಟಿಗೂ ಮುನ್ನಾ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೌದಿ ಅರೇಬಿಯಾದ ಯುವರಾಜನನ್ನು ಔಪಚಾರಿಕವಾಗಿ ಬರಮಾಡಿಕೊಂಡರು. ಮೂರು ಪಡೆಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಯಶಸ್ವಿ ಜಿ 20 ಶೃಂಗಸಭೆ ಆಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ಸೌದಿ ಅರೇಬಿಯಾ ರಾಜ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶನಿವಾರ ನಡೆದ ಜಿ 20 ನಾಯಕರ ಶೃಂಗಸಭೆಯಲ್ಲಿ, ಭಾರತ, ಯುನೈಟೆಡ್ ಸ್ಟೇಟ್ಸ್, ಸೌದಿ ಅರೇಬಿಯಾ ಮತ್ತು ಯುರೋಪಿಯನ್ ಯೂನಿಯನ್ ಮೆಗಾ ಭಾರತ-ಮಧ್ಯಪ್ರಾಚ್ಯ-ಯುರೋಪ್ ಹಡಗು ಮತ್ತು ರೈಲ್ವೆ ಸಂಪರ್ಕ ಕಾರಿಡಾರ್ ಪ್ರಾರಂಭಿಸುವ ಐತಿಹಾಸಿಕ ಒಪ್ಪಂದವನ್ನು ಘೋಷಿಸಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT