ಸಂಸತ್ ಸಿಬ್ಬಂದಿಯ ನೂತನ ಸಮವಸ್ತ್ರ ಚಿತ್ರ 
ದೇಶ

ತೀರಾ ಸಣ್ಣತನದ ಕೆಲಸ: ಸಂಸತ್ ಸಿಬ್ಬಂದಿಯ ಸಮವಸ್ತ್ರದ ಮೇಲೆ ಕಮಲದ ಚಿಹ್ನೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಸಂಸತ್  ಸಿಬ್ಬಂದಿಯ ಹೊಸ ಸಮವಸ್ತ್ರದ ಮೇಲೆ ಆಡಳಿತ ಪಕ್ಷದ ಚುನಾವಣಾ ಚಿಹ್ನೆ 'ಕಮಲ' ಮುದ್ರಿಸಲಾಗಿದೆ ಎಂಬ ವರದಿಗಳ ನಡುವೆ ಬಿಜೆಪಿ ಸಂಸತ್ತನ್ನು ಏಕಪಕ್ಷೀಯವಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ನವದೆಹಲಿ: ಸಂಸತ್ ಸಿಬ್ಬಂದಿಯ ಹೊಸ ಸಮವಸ್ತ್ರದ ಮೇಲೆ ಆಡಳಿತ ಪಕ್ಷದ ಚುನಾವಣಾ ಚಿಹ್ನೆ 'ಕಮಲ' ಮುದ್ರಿಸಲಾಗಿದೆ ಎಂಬ ವರದಿಗಳ ನಡುವೆ ಬಿಜೆಪಿ ಸಂಸತ್ತನ್ನು ಏಕಪಕ್ಷೀಯವಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ. ರಾಷ್ಟ್ರೀಯ ಪ್ರಾಣಿ ಹುಲಿ ಅಥವಾ ಪಕ್ಷಿಯಾದ ನವಿಲು ಬಿಟ್ಟು ಕಮಲವನ್ನು ಏಕೆ ಹೊಸ ಸಮವಸ್ತ್ರದಲ್ಲಿ ಸೇರಿಸಲಾಗುತ್ತಿದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ವಿಪ್ ಮಾಣಿಕ್ಕಂ ಟ್ಯಾಗೋರ್ ಪ್ರಶ್ನಿಸಿದ್ದಾರೆ.

ಈ ಕುರಿತು #NewDressforParliamentStaff" ಹ್ಯಾಷ್ ಟ್ಯಾಗ್ ಬಳಸಿ ಎಕ್ಸ್ ಖಾತೆಯಲ್ಲಿ ಬಿಜೆಪಿ ಪ್ರಶ್ನಿಸಿರುವ ಟ್ಯಾಗೋರ್, 'ಕಮಲ ಮಾತ್ರ ಏತಕ್ಕೆ? ನವಿಲು ಅಥವಾ ಹುಲಿ ಏಕೆ ಇಲ್ಲ? ಓಹ್, ಅವುಗಳು ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆ ಅಲ್ಲ. ಯಾಕೆ ಈ ಪತನ ಸರ್ ಓಂ ಬಿರ್ಲಾ ಎಂದು ಕೇಳಿದ್ದಾರೆ. ಸಂಸತ್ತಿನ ಸಿಬ್ಬಂದಿಯ ಹೊಸ ಸಮವಸ್ತ್ರದ ಮೇಲೆ ಕಮಲದ ಚಿಹ್ನೆ ಮುದ್ರಿಸಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

"ಈ ರೀತಿಯ ಸಣ್ಣತನ ಸರಿಯಲ್ಲ, ಬಿಜೆಪಿ ಬೆಳೆಯುತ್ತಿದ್ದು, ಸಂಸತ್ತನ್ನು ಏಕಪಕ್ಷೀಯ ವಿಷಯವನ್ನಾಗಿ ಮಾಡಬಾರದು. ಸಂಸತ್ತು ಪಕ್ಷದ ಚಿಹ್ನೆಯ ಭಾಗವಾಗುತ್ತಿದೆ. ಇದು ದುರದೃಷ್ಟಕರ. ಸಂಸತ್ತು ಎಲ್ಲಾ ಪಕ್ಷಗಳಿಗಿಂತ ಮೇಲಿತ್ತು. ಇದು ಬಿಜೆಪಿಯು ಇತರ ಎಲ್ಲ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬುದನ್ನು ತೋರಿಸುತ್ತಿದೆ ಎಂದು ಟ್ಯಾಗೋರ್ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT