ಮೃತ ಸೇನೆ ಶ್ವಾನ ಕೆಂಟ್ 
ದೇಶ

ರಜೌರಿ ಎನ್​ಕೌಂಟರ್​: ಯೋಧರನ್ನು ರಕ್ಷಿಸಿ ಉಗ್ರರ ಗುಂಡೇಟಿಗೆ ಭಾರತೀಯ ಸೇನೆಯ 6 ವರ್ಷದ ಶ್ವಾನ 'ಕೆಂಟ್' ಬಲಿ; ಇಬ್ಬರು ಉಗ್ರರು ಹತ!

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ.

ಇಬ್ಬರು ಉಗ್ರರು ಹಾಗೂ ಸೇನೆ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿ ಇಬ್ಬರು ಉಗ್ರರು ಹತನಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇವರೊಂದಿಗೆ ಸೇನೆಯ ಕೆಂಟ್‌ ಎನ್ನುವ ಶ್ವಾನ ತನ್ನ ಜತೆಗಿನ ಸೈನಿಕನ ಜೀವ ಉಳಿಸಿ ಮೃತಪಟ್ಟಿದೆ.

ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯ ನಾಯಿಯಾಗಿದ್ದು, ತನ್ನ ಹ್ಯಾಂಡ್ಲರ್ ಅನ್ನು ಉಳಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದೆ. ಕೆಂಟ್ ಕೊನೆಯುಸಿರೆಳೆಯುವ ಮುನ್ನ ಉಗ್ರರ ಜಾಡು ಹಿಡಿದು ಸೈನಿಕರನ್ನು ಅತ್ತ ಕರೆದೊಯ್ಯುತ್ತಿತ್ತು.

ಸೇನಾ ಶ್ವಾನ ಕೆಂಟ್ ಆಪರೇಷನ್ ಸುಜಲಿಗಾಲದಲ್ಲಿ ಮುಂಚೂಣಿಯಲ್ಲಿತ್ತು, ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಸೇರಿದಂತೆ ಇನ್ನೂ ಮೂವರು ಯೋಧರು ಗಾಯಗೊಂಡಿದ್ದಾರೆ.

ಇಬ್ಬರು ಉಗ್ರರು ಇಲ್ಲಿನ ಕಾಡಿನಲ್ಲಿ ಒಳನುಸುಳುತ್ತಿರುವ ಮಾಹಿತಿಯನ್ನು ಪಡೆದ ಸೇನೆ, ‘ಆಪರೇಷನ್‌ ಸುಜಲೀಗಾಲಾ’ ಮೂಲಕ ಹುಡುಕಾಟ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹಾಗೂ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಜೊತೆಗೆ ಇಬ್ಬರು ಸೇನೆ ಜವಾನ್‌ ಹಾಗೂ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿಕ್ಕ ಓರ್ವ ಉಗ್ರನಿಗಾಗಿ ಹುಡುಕಾಟ ಮುಂದುವರೆದಿದೆ. ಉಗ್ರರಿಂದ ಬಟ್ಟೆ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಸಂಸದ ಇಮ್ರಾನ್ ಮಸೂದ್