ಪವನ್ ಕಲ್ಯಾಣ್ 
ದೇಶ

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್

ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

ವಿಜಯವಾಡ: ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

ರಾಜಮಹೇಂದ್ರವರಂನ ಕೇಂದ್ರ ಕಾರಾಗೃಹದಲ್ಲಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಗುರುವಾರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ, ಪವನ್ ಕಲ್ಯಾಣ್, ಟಿಡಿಪಿಯೊಂದಿಗೆ ಪಕ್ಷದ ಮೈತ್ರಿಯನ್ನು ಖಚಿತಪಡಿಸಿದರು. 

ಇಲ್ಲಿಯವರೆಗೂ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಇಟ್ಟುಕೊಂಡಿದ್ದೆ. ಆದರೆ ಈಗ 2024ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ ಆರ್ ಸಿ ಪಕ್ಷವನ್ನು ಅಧಿಕಾರದಿಂದ ಕಿತ್ತು ಹಾಕಲು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದರು. 

ಇನ್ನೂ ಮುಂದೆ ಆಂಧ್ರದಲ್ಲಿ ವೈಎಸ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದ ಪವನ್ ಕಲ್ಯಾಣ್, ಜನಸೇನಾ ಪಕ್ಷ ಮತ್ತು ಟಿಡಿಪಿ ನಡುವಿನ ಮೈತ್ರಿಗೆ ಬಿಜೆಪಿ ಕೂಡ ಸೇರುವ ಭರವಸೆಯಲ್ಲಿದ್ದಾರೆ. ಇನ್ನೂ ಆರು ತಿಂಗಳಲ್ಲಿ ಅಥವಾ ಅದಕ್ಕೂ ಮುಂಚಿತವಾಗಿ ಚುನಾವಣೆ ನಡೆದರೂ ಜನಾಸೇನಾ ಪಕ್ಷ ಹಾಗೂ ಟಿಡಿಪಿ ಮೈತ್ರಿ ಎದುರಿಸಲು ಸಜ್ಜಾಗಿವೆ ಎಂದರು.

ಇದೇ ಸಂದರ್ಭದಲ್ಲಿ  ಉಭಯ ಪಕ್ಷಗಳ ಕ್ರಿಯಾ ಯೋಜನೆ ರೂಪಿಸಲು ಜಂಟಿ ಕ್ರಿಯಾ ಸಮಿತಿ ರಚಿಸಲಾಗುವುದು ಎಂದು ಪವನ್ ಕಲ್ಯಾಣ್ ಘೋಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT