ಹರ್ಮನ್ ಪ್ರೀತ್ ಕೌರ್ 
ದೇಶ

ಟೈಮ್ ನ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಹರ್ಮನ್‌ಪ್ರೀತ್ ಕೌರ್ ಸೇರಿ ಮೂವರು ಭಾರತೀಯರು

ಟೈಮ್ ನಿಯತಕಾಲಿಕ ಬಿಡುಗಡೆ ಮಾಡಿದ ಜಗತ್ತಿನ ಅಗ್ರ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಮಹಿಳಾ ಕ್ರಿಕೆಟರ್ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ.

ನ್ಯೂಯಾರ್ಕ್: ಟೈಮ್ ನಿಯತಕಾಲಿಕ ಬಿಡುಗಡೆ ಮಾಡಿದ ಜಗತ್ತಿನ ಅಗ್ರ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಮಹಿಳಾ ಕ್ರಿಕೆಟರ್ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ.

ಬುಧವಾರ ಬಿಡುಗಡೆಯಾದ '2023 TIME100 Next: ಎಮರ್ಜಿಂಗ್ ಲೀಡರ್ಸ್ ಶೇಪಿಂಗ್ ದಿ ವರ್ಲ್ಡ್' ಪಟ್ಟಿಯಲ್ಲಿ ಭಾರತೀಯರಾದ ಹರ್ಮನ್‌ಪ್ರೀತ್ ಕೌರ್, ನಂದಿತಾ ವೆಂಕಟೇಶನ್ ಮತ್ತು ವಿನು ಡೇನಿಯಲ್ ಅವರು ಸ್ಥಾನ ಪಡೆದಿದ್ದಾರೆ. ಭಾರತೀಯ ಮೂಲದ ನಬರುನ್ ದಾಸ್‌ಗುಪ್ತಾ ಅವರು ಸಹ ಈ ಪಟ್ಟಿಯಲ್ಲಿದ್ದಾರೆ.

ಮಹಿಳಾ ಕ್ರಿಕೆಟ್ ಅನ್ನು ವಿಶ್ವದ ಅತ್ಯಂತ ಅಮೂಲ್ಯವಾದ ಕ್ರೀಡಾ ಆಸ್ತಿಯಾಗಿ ಪರಿವರ್ತಿಸುವಲ್ಲಿ ಕೌರ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಟೈಮ್ ಮ್ಯಾಗಜೀನ್ ಹೇಳಿದೆ.

34ರ ಹರೆಯದ ಕೌರ್ ಅವರು ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಆಟಗಾರ್ತಿಯರಲ್ಲಿ ವಿಶ್ವಾಸ ತುಂಬಿದ್ದಾರೆ. ಕೌರ್ ಅವರು 2017ರಲ್ಲಿ ಆಸ್ಟ್ರೇಲಿಯ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಕೇವಲ 115 ಎಸೆತಗಳಲ್ಲಿ ಔಟಾಗದೆ 171 ರನ್ ಗಳಿಸಿ ಲೆಜೆಂಡರಿ ಸ್ಥಾನಮಾನ ಪಡೆದುಕೊಂಡಿದ್ದರು. ಆಕೆಯ ಅಸಾಧಾರಣ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದರು ಎಂದು ಪ್ರಕಟಣೆ ತಿಳಿಸಿದೆ.

33 ವರ್ಷದ ನಂದಿತಾ ವೆಂಕಟೇಶನ್ ಅವರು ಕ್ಷಯರೋಗಕ್ಕೆ ಸೂಕ್ತ ಔಷಧ ಸಿಗದೇ ತಮ್ಮ ಶ್ರವಣ ಶಕ್ತೆಯನ್ನೇ ಕಳೆದುಕೊಂಡಿದ್ದಾರೆ. ಕ್ಷಯಕ್ಕೆ ಪರಿಣಾಮಕಾರಿ ದುಬಾರಿ ಔಷಧ ಹೊಂದಿರುವ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗೆ ಮತ್ತೊಮ್ಮೆ ಪೇಟೆಂಟ್ ನೀಡಬಾರದು ಎಂದು ಅರ್ಜಿ ಸಲ್ಲಿಸಿ ಗೆದ್ದಿದ್ದಾರೆ. ಪರಿಣಾಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಕ್ಷಯ ರೋಗಕ್ಕೆ ಜನೆರಿಕ್ ಔಷಧ ಸಿಗುತ್ತಿದೆ. 

ಇನ್ನು ವಾಲ್‌ಮೇಕರ್ಸ್ ಎಂಬ ಸ್ಟುಡಿಯೊವನ್ನು ಹೊಂದಿರುವ ವಿನು ಡೆನಿಯಲ್ ಅವರು, ಕೇರಳದ ಕೂಲಿ ಕಾರ್ಮಿಕರು, ಮೆಸ್ತ್ರಿಗಳು, ಸ್ಥಳೀಯರಿಂದ ಪ್ರೇರಣೆ ಪಡೆದು ಕಡಿಮೆ ವೆಚ್ಚದಲ್ಲಿ ಮನೆ ಕಟ್ಟುವ ಕ್ರಮವೊಂದನ್ನು ಸಿದ್ಧಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT