ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಮೈತೇಯಿ ಸಮುದಾಯ; ಮಣಿಪುರದಿಂದ ಅಸ್ಸಾಂ ರೈಫಲ್ಸ್ ಹಿಂಪಡೆಯಲು ಒತ್ತಾಯ

ಇಂಫಾಲ್ ಕಣಿವೆ ಮೂಲದ ನಾಗರಿಕ ಸಮಾಜ ಸಂಘಟನೆಗಳ ಛತ್ರಿ ಸಂಸ್ಥೆಯಾದ COCOMIಯ ಪ್ರತಿನಿಧಿಗಳು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು ಮತ್ತು ಪಡೆ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಇಂಫಾಲ: ಇಂಫಾಲ್ ಕಣಿವೆ ಮೂಲದ ನಾಗರಿಕ ಸಮಾಜ ಸಂಘಟನೆಗಳ ಛತ್ರಿ ಸಂಸ್ಥೆಯಾದ COCOMIಯ ಪ್ರತಿನಿಧಿಗಳು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು ಮತ್ತು ಪಡೆ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಮೈತೇಯಿ ಸಮುದಾಯವನ್ನು ಪ್ರತಿನಿಧಿಸುವ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI), ತಮ್ಮ ಪ್ರತಿನಿಧಿಗಳು ಗುರುವಾರ ದೆಹಲಿಯ ಅವರ ನಿವಾಸದಲ್ಲಿ ಸಿಂಗ್ ಅವರನ್ನು ಭೇಟಿಯಾಗಿ, ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮಣಿಪುರ ಬಿಕ್ಕಟ್ಟಿನ ವಿಚಾರವಾಗಿ ವಿಶ್ವಸಂಸ್ಥೆಯನ್ನು ಸಂಪರ್ಕಿಸುವ ಮೂಲಕ ಕುಕಿ ಸಮುದಾಯ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ ಎಂದು ಅವರು ಮನವಿ ಪತ್ರದಲ್ಲಿ ಹೇಳಿದ್ದಾರೆ.

ಡ್ರಗ್ಸ್-ಭಯೋತ್ಪಾದನೆ, ಅಕ್ರಮ ವಲಸಿಗರು ಮತ್ತು ಅವರ ಗುರುತಿಸುವಿಕೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಅಮಾನತುಗೊಳಿಸುವ ವಿಷಯಗಳನ್ನು ರಾಜನಾಥ್ ಸಿಂಗ್ ಅವರೊಂದಿಗೆ ಪ್ರಸ್ತಾಪಿಸಿದ್ದಾಗಿ ಹೇಳಿಕೆ ತಿಳಿಸಿದೆ.

ಮತ್ತೊಂದೆಡೆ, ಕುಕಿ ಗುಂಪುಗಳು ರಾಜ್ಯ ಪೊಲೀಸರು ಪಕ್ಷಪಾತ ಧೋರಣೆಯನ್ನು ಅನುಸರಿಸುತ್ತಿವೆ ಎಂದು ಆರೋಪಿಸುತ್ತಿವೆ.
ಕಳೆದ ತಿಂಗಳು, ರಾಜ್ಯದ 10 ಕುಕಿ ಶಾಸಕರು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಿಂದ ಹಿಂತೆಗೆದುಕೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಇದು ಬುಡಕಟ್ಟು ಜನಾಂಗದವರ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದಿದ್ದರು.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಸುಮಾರು 175 ಜನರು ಸಾವಿಗೀಡಾಗಿದ್ದಾರೆ ಮತ್ತು 1,100 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT