ಉಧಂಪುರ ರೈಲು ನಿಲ್ದಾಣ 
ದೇಶ

ಉಧಂಪುರ ರೈಲು ನಿಲ್ದಾಣಕ್ಕೆ 'ಹುತಾತ್ಮ ಯೋಧನ ಹೆಸರು' ಮರು ನಾಮಕರಣ

ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ರೈಲು ನಿಲ್ದಾಣಕ್ಕೆ ಹುತಾತ್ಮ ಯೋಧ ತುಷಾರ್ ಮಹಾಜನ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಉಧಂಪುರ್ :  ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ರೈಲು ನಿಲ್ದಾಣಕ್ಕೆ ಹುತಾತ್ಮ ಯೋಧ ತುಷಾರ್ ಮಹಾಜನ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಫೆಬ್ರವರಿ 2016 ರಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಜೆಕೆಇಡಿಐ ಕಟ್ಟಡದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ತನ್ನ ಸಹ ಸೈನಿಕರನ್ನು ರಕ್ಷಿಸುವಾಗ ಭಯೋತ್ಪಾದಕನನ್ನು ಕೊಂದ ನಂತರ ಸೇನಾ ವಿಶೇಷ ಪಡೆಗಳ 9 ಪ್ಯಾರಾ ಅಧಿಕಾರಿ ಕ್ಯಾಪ್ಟನ್ ತುಷಾರ್ ಮಹಾಜನ್ ಹುತಾತ್ಮರಾಗಿದ್ದರು. 

ಲೆಫ್ಟಿನೆಂಟ್ ಗವರ್ನರ್ ಕಚೇರಿಯು ಔಪಚಾರಿಕ ಅನುಮೋದನೆ ನೀಡಿದ ನಂತರ  ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಉಧಮ್‌ಪುರ ರೈಲು ನಿಲ್ದಾಣಕ್ಕೆ 'ಹುತಾತ್ಮ ಕ್ಯಾಪ್ಟನ್ ತುಷಾರ್ ಮಹಾಜನ್ ರೈಲು ನಿಲ್ದಾಣ' ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಸಾಮಾನ್ಯ ಆಡಳಿತ ಇಲಾಖೆಯ ಆಯುಕ್ತ ಕಾರ್ಯದರ್ಶಿ ಸಂಜೀವ್ ವರ್ಮಾ ಗುರುವಾರ ಸಂಜೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. 

ಉಧಮ್‌ಪುರ ರೈಲು ನಿಲ್ದಾಣದ ಮರುನಾಮಕರಣಕ್ಕೆ ಗೃಹ ವ್ಯವಹಾರಗಳ ಸಚಿವಾಲಯವು ಸೆಪ್ಟೆಂಬರ್ 6 ರಂದು ಅನುಮೋದನೆ ನೀಡಿತ್ತು. ಲೋಕಸಭೆಯಲ್ಲಿ ಕಥುವಾ-ಉಧಂಪುರ ಕ್ಷೇತ್ರವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಸೆಪ್ಟೆಂಬರ್ 6 ರಂದು ಟ್ವೀಟ್ ಮೂಲಕ ಈ  ನಿರ್ಧಾರವನ್ನು ಪ್ರಕಟಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT