ರಾಮನಾಥ್ ಕೋವಿಂದ್ 
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧ ಸೆಪ್ಟೆಂಬರ್ 23 ರಂದು ಮೊದಲ ಸಭೆ

ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ ನೇತೃತ್ವ ವಹಿಸಿರುವ...

ಭುವನೇಶ್ವರ: ದೇಶದ ಎಲ್ಲಾ ರಾಜ್ಯಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಸಮಿತಿಯ ನೇತೃತ್ವ ವಹಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ - ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 2 ರಂದು ಎಂಟು ಸದಸ್ಯರ ಸಮಿತಿ ರಚಿಸಿದೆ.

ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 23 ರಂದು ನಡೆಯಲಿದೆ ಎಂದು ಕೋವಿಂದ್ ಅವರು ಇಂದು ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ರಾಮನಾಥ್ ಕೋವಿಂದ್ ಅವರು ಖಾಸಗಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಭುವನೇಶ್ವರಕ್ಕೆ ಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ

ಭಾರತದಲ್ಲಿ ಹೆಚ್ಚುವರಿಯಾಗಿ 3 ಲಕ್ಷ ಕೋಟಿ ಹೂಡಿಕೆ ಯೋಜನೆ ಪ್ರಕಟಿಸಿದ Amazon: 10 ಲಕ್ಷ ಉದ್ಯೋಗ ಸೃಷ್ಠಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

Calm isn't silence: 'ಬ್ರೇಕಪ್' ಸುತ್ತ ಅನುಮಾನ ಹುಟ್ಟು ಹಾಕಿದ ಸ್ಮೃತಿ ಮಂಧಾನ ಪೋಸ್ಟ್! ವೈರಲ್

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

SCROLL FOR NEXT