ಮಲ್ಲಿಕಾರ್ಜುನ ಖರ್ಗೆ 
ದೇಶ

ಹೊಸ ಸಂಸತ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಖರ್ಗೆ ಗೈರು, ಇದೇ ಕಾರಣ!

ನೂತನ ಸಂಸತ್ ಭವನದಲ್ಲಿ ಭಾನುವಾರ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಿಳಿಸಿದ್ದು, ‘ಸಾಕಷ್ಟು ತಡವಾಗಿ’ ಆಹ್ವಾನ ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ನೂತನ ಸಂಸತ್ ಭವನದಲ್ಲಿ ಭಾನುವಾರ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಿಳಿಸಿದ್ದು, ‘ಸಾಕಷ್ಟು ತಡವಾಗಿ’ ಆಹ್ವಾನ ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ಈ ಕುರಿತು  ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 15ರ ಸಂಜೆಯ ವೇಳೆಗೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.  ಸೆಪ್ಟೆಂಬರ್ 15, 2023 ರಂದು ಹೊಸ ಸಂಸತ್ತಿನ ಕಟ್ಟಡದಲ್ಲಿ ನಾಳೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಾಕಷ್ಟು ತಡವಾಗಿ ಸಂಜೆಯ ವೇಳೆಗೆ'  ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂಬ ನಿರಾಶೆಯಿಂದ ಪತ್ರ ಬರೆಯುತ್ತಿದ್ದೇನೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. .

ಸೆಪ್ಟೆಂಬರ್ 16 ಮತ್ತು 17 ರಂದು ಹೈದರಾಬಾದ್‌ನಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಗಳನ್ನು ನಿಗದಿಪಡಿಸಲಾಗಿದೆ ಕಾರ್ಯಕ್ರಮಗಳನ್ನು ಬಹಳ ಮುಂಚಿತವಾಗಿ ನಿಗದಿಪಡಿಸಲಾಗಿದ್ದು,  ಸಭೆಗಳನ್ನು ನಡೆಸಲು ಪ್ರಸ್ತುತ ಹೈದರಾಬಾದ್‌ ನಲ್ಲಿದ್ದು, ಸೆಪ್ಟೆಂಬರ್ 17 ರ ರಾತ್ರಿ ತಡವಾಗಿ ದೆಹಲಿಗೆ ವಾಪಸ್ಸಾಗುತ್ತಿರುವುದಾಗಿ ಅವರು  ಎಂದು ಖರ್ಗೆ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ತಿಳಿಸಿದ್ದಾರೆ. 

ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಭಾನುವಾರ ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಸೋಮವಾರದಿಂದ ಆರಂಭವಾಗುವ ಐದು ದಿನಗಳ ಸಂಸತ್ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಸಂಸತ್ತಿನ ಕಲಾಪಗಳು ಹಳೆಯದರಿಂದ ಪಕ್ಕದ ಹೊಸ ಕಟ್ಟಡಕ್ಕೆ ಬದಲಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!