ದೇಶ

ಹೊಸ ಸಂಸತ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಖರ್ಗೆ ಗೈರು, ಇದೇ ಕಾರಣ!

Nagaraja AB

ನವದೆಹಲಿ: ನೂತನ ಸಂಸತ್ ಭವನದಲ್ಲಿ ಭಾನುವಾರ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಿಳಿಸಿದ್ದು, ‘ಸಾಕಷ್ಟು ತಡವಾಗಿ’ ಆಹ್ವಾನ ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ಈ ಕುರಿತು  ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 15ರ ಸಂಜೆಯ ವೇಳೆಗೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.  ಸೆಪ್ಟೆಂಬರ್ 15, 2023 ರಂದು ಹೊಸ ಸಂಸತ್ತಿನ ಕಟ್ಟಡದಲ್ಲಿ ನಾಳೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಾಕಷ್ಟು ತಡವಾಗಿ ಸಂಜೆಯ ವೇಳೆಗೆ'  ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂಬ ನಿರಾಶೆಯಿಂದ ಪತ್ರ ಬರೆಯುತ್ತಿದ್ದೇನೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. .

ಸೆಪ್ಟೆಂಬರ್ 16 ಮತ್ತು 17 ರಂದು ಹೈದರಾಬಾದ್‌ನಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಗಳನ್ನು ನಿಗದಿಪಡಿಸಲಾಗಿದೆ ಕಾರ್ಯಕ್ರಮಗಳನ್ನು ಬಹಳ ಮುಂಚಿತವಾಗಿ ನಿಗದಿಪಡಿಸಲಾಗಿದ್ದು,  ಸಭೆಗಳನ್ನು ನಡೆಸಲು ಪ್ರಸ್ತುತ ಹೈದರಾಬಾದ್‌ ನಲ್ಲಿದ್ದು, ಸೆಪ್ಟೆಂಬರ್ 17 ರ ರಾತ್ರಿ ತಡವಾಗಿ ದೆಹಲಿಗೆ ವಾಪಸ್ಸಾಗುತ್ತಿರುವುದಾಗಿ ಅವರು  ಎಂದು ಖರ್ಗೆ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ತಿಳಿಸಿದ್ದಾರೆ. 

ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಭಾನುವಾರ ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಸೋಮವಾರದಿಂದ ಆರಂಭವಾಗುವ ಐದು ದಿನಗಳ ಸಂಸತ್ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಸಂಸತ್ತಿನ ಕಲಾಪಗಳು ಹಳೆಯದರಿಂದ ಪಕ್ಕದ ಹೊಸ ಕಟ್ಟಡಕ್ಕೆ ಬದಲಾಗುವ ಸಾಧ್ಯತೆಯಿದೆ.

SCROLL FOR NEXT