ಜೈರಾಮ್‌ ರಮೇಶ್ 
ದೇಶ

ಸಂಸತ್ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ

ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಒಂದು ವಾರದ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಕಾಂಗ್ರೆಸ್ ಭಾನುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಒಂದು ವಾರದ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಕಾಂಗ್ರೆಸ್ ಭಾನುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆಗ್ರಹಿಸುತ್ತಿರುವುದಾಗಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸಂಬಂಧ ಹಿಂದಿನ ಕಾಂಗ್ರೆಸ್ ಸರ್ಕಾರಗಳನ್ನು ಶ್ಲಾಘಿಸಿದ ಜೈರಾಮ್ ರಮೇಶ್, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರ ಮೇ ನಲ್ಲಿ ಪಂಚಾಯತ್ ಮತ್ತು ನಗರಪಾಲಿಕೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಿದರು - ಇದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು. ಆದರೆ ರಾಜ್ಯಸಭೆಯಲ್ಲಿ ವಿಫಲವಾಯಿತು.

"ಪ್ರಧಾನಿ ಪಿವಿ ನರಸಿಂಹ ರಾವ್ ಅವರು 1993 ರ ಏಪ್ರಿಲ್ ನಲ್ಲಿ ಪಂಚಾಯತ್ ಮತ್ತು ನಗರಪಾಲಿಕೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಿದರು ಮತ್ತು ಈ ಎರಡೂ ಮಸೂದೆಗಳು ಅಂಗೀಕರಿಸಲ್ಪಟ್ಟವು ಮತ್ತು ಕಾನೂನಾಗಿ ಮಾರ್ಪಟ್ಟವು. ಈಗ ಪಂಚಾಯಿತಿ ಮತ್ತು ನಗರಪಾಲಿಕೆಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಚುನಾಯಿತ ಮಹಿಳಾ ಪ್ರತಿನಿಧಿಗಳಿದ್ದಾರೆ'' ಎಂದು ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ತು ಮತ್ತು ರಾಜ್ಯ ವಿಧಾನಸಭೆ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ತಂದರು. ಈ ಮಸೂದೆಯನ್ನು ಮಾರ್ಚ್ 9, 2010 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಆದರೆ ಲೋಕಸಭೆಯಲ್ಲಿ ಅಂಗೀಕರಿಸಿಲ್ಲ.

ರಾಜ್ಯಸಭೆಯಲ್ಲಿ ಮಂಡಿಸಿದ/ಅಂಗೀಕಾರಗೊಂಡ ವಿಧೇಯಕಗಳು ರದ್ದಾಗುವುದಿಲ್ಲ. ಮಹಿಳಾ ಮೀಸಲಾತಿ ಮಸೂದೆ ಇನ್ನೂ ಹೆಚ್ಚು ಸಕ್ರಿಯವಾಗಿದೆ. ಕಾಂಗ್ರೆಸ್ ಪಕ್ಷ ಕಳೆದ ಒಂಬತ್ತು ವರ್ಷಗಳಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಈಗ ಲೋಕಸಭೆಯಲ್ಲೂ ಅಂಗೀಕರಿಸಬೇಕು ಎಂದು ಒತ್ತಾಯಿಸುತ್ತಿರುವುದಾಗಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT