ಡಿಸಿಎಂ ಡಿಕೆ ಶಿವಕುಮಾರ್ 
ದೇಶ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು: ಡಿಸಿಎಂ ಡಿಕೆ ಶಿವಕುಮಾರ್

ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ತೆಲಂಗಾಣ: ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತೆಲಂಗಾಣದಲ್ಲಿ ನೋಟವನ್ನು ಬದಲಾಯಿಸಲಿದೆ. ಅಲ್ಲದೇ, ದೇಶದ ನೋಟವನ್ನು ಬದಲಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದೇಶಕ್ಕೆ ಭರವಸೆ ನೀಡಿದ್ದೇವೆ ಎಂದರು. 

ಮತ್ತೊಂದೆಡೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, 2024ರಲ್ಲಿ ಬಿಜೆಪಿ ಸರ್ಕಾರವನ್ನು ನಾವು ಕಿತ್ತು ಹಾಕಬೇಕು ಎಂಬುದು ಎರಡು ದಿನಗಳ ಸಭೆಯ ಸ್ಪಷ್ಟ ಕಾರ್ಯಸೂಚಿಯಾಗಿತ್ತು. ಆದ್ದರಿಂದ ಇದು ದೇಶದಾದ್ಯಂತ ಪಕ್ಷದ ಕಾರ್ಯಕರ್ತರಿಗೆ ಸಿಡಬ್ಲ್ಯುಸಿಯಿಂದ ಕರೆ ನೀಡಲಾಗಿದೆ. ಈಗ ವಿಶ್ರಾಂತಿ ತೆಗೆದುಕೊಳ್ಳದೆ, ಗೆಲ್ಲಲು ಹೋರಾಡಬೇಕಾಗಿದೆ. ಎಲ್ಲಾ ಐದು ರಾಜ್ಯಗಳಲ್ಲಿ ಸರ್ಕಾರ ರಚಿಸಲಿದ್ದೇವೆ ಎಂಬ ಬಲವಾದ ವಿಶ್ವಾಸವಿದೆ ಎಂದು ತಿಳಿಸಿದರು.

 ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. ಬಿಜೆಪಿ ಹಾಗೂ ಇತರೆ ಪಕ್ಷಗಳನ್ನು ಸೋಲಿಸುವುದು ಹೇಗೆ ಎಂಬ ಬಗ್ಗೆ ಚರ್ಚಿಸಿ ಕಾರ್ಯತಂತ್ರ ರೂಪಿಸಿದ್ದೇವೆ. ಮುಂಬರುವ ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT