ಪ್ರಾತಿನಿಧಿಕ ಚಿತ್ರ 
ದೇಶ

ರಾಂಚಿ ಅಣೆಕಟ್ಟಿನಲ್ಲಿ 8,000ಕ್ಕೂ ಹೆಚ್ಚು ಮೀನುಗಳು ಸಾವು, ತನಿಖೆಗೆ ಆದೇಶ

ರಾಂಚಿಯ ಅಣೆಕಟ್ಟಿನಲ್ಲಿ 8,000ಕ್ಕೂ ಹೆಚ್ಚು ಮೀನುಗಳು ಸತ್ತಿರುವುದು ಕಂಡುಬಂದಿದ್ದು, ನಂತರ ಮೀನುಗಾರಿಕೆ ಇಲಾಖೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಂಚಿ: ರಾಂಚಿಯ ಅಣೆಕಟ್ಟಿನಲ್ಲಿ 8,000ಕ್ಕೂ ಹೆಚ್ಚು ಮೀನುಗಳು ಸತ್ತಿರುವುದು ಕಂಡುಬಂದಿದ್ದು, ನಂತರ ಮೀನುಗಾರಿಕೆ ಇಲಾಖೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಗೆಟಲ್‌ಸುಡ್‌ ಅಣೆಕಟ್ಟಿನಲ್ಲಿ ಮೀನು ಸಾಕಣೆಗೆಂದು ಹಾಕಲಾಗಿದ್ದ ನಾಲ್ಕು ಪಂಜರಗಳಲ್ಲಿ 500 ಗ್ರಾಂನಿಂದ 1 ಕೆಜಿ ತೂಕದ ಮೀನುಗಳು ಸತ್ತಿವೆ ಎಂದು ಜಿಲ್ಲಾ ಮೀನುಗಾರಿಕಾ ಅಧಿಕಾರಿ ಅರುಪ್ ಕುಮಾರ್ ಚೌಧರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ರಾಜ್ಯ ಕೃಷಿ ಸಚಿವ ಬಾದಲ್ ಪತ್ರಲೇಖ್ ಶನಿವಾರ ಸಂಜೆ ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಭಾನುವಾರದಂದು ಈ ಬಗ್ಗೆ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಇಲಾಖೆ ಕಾರ್ಯದರ್ಶಿಗೆ ಬಾದಲ್ ಸೂಚಿಸಿದ್ದಾರೆ.
ತಾನು ಮತ್ತು ತನ್ನ ತಂಡ ಅಣೆಕಟ್ಟಿಗೆ ಭೇಟಿ ನೀಡುತ್ತೇವೆ ಮತ್ತು ಮೀನುಗಳು ಹೇಗೆ ಸತ್ತವು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತೇವೆ ಎಂದು ಚೌಧರಿ ಹೇಳಿದರು.

'ಮೀನುಗಳ ಸಾವಿಗೆ ಆಮ್ಲಜನಕದ ಕೊರತೆ, ರೋಗಗಳು ಅಥವಾ ಮಾಲಿನ್ಯದಂತಹ ಹಲವಾರು ಕಾರಣಗಳಿರಬಹುದು. ಆಮ್ಲಜನಕದ ಕೊರತೆ ಅಥವಾ ರೋಗವು ಈ ಮೀನುಗಳ ಸಾವಿಗೆ ಕಾರಣವಾಗಿರಬಹುದು ಎಂಬುದು ನಮ್ಮ ಶಂಕೆ. ಆದಾಗ್ಯೂ, ನಿಖರವಾದ ಕಾರಣ ಏನೆಂಬುದು ತನಿಖೆಯ ನಂತರವೇ ತಿಳಿಯಲಿದೆ. ನಾವು ನಮ್ಮ ತನಿಖೆಯನ್ನು ಮುಗಿಸುತ್ತೇವೆ' ಎಂದು ಚೌಧರಿ ಹೇಳಿದರು.

ಮೀನುಗಳು ಉಳಿಯಲು ನೀರಿನಲ್ಲಿ ಆಮ್ಲಜನಕದ ಪ್ರಮಾಣವು ಲೀಟರ್‌ಗೆ ಐದು ಮಿಲಿಗ್ರಾಂ ಅಥವಾ ಅದಕ್ಕಿಂತ ಹೆಚ್ಚು ಇರಬೇಕು. ಪ್ರತಿ ಲೀಟರ್‌ಗೆ ಮೂರು ಮಿಲಿಗ್ರಾಂಗಿಂತ ಕಡಿಮೆಯಾದರೆ, ಮೀನುಗಳು ಸಾಯುತ್ತವೆ ಎಂದು ಅವರು ಹೇಳಿದರು.

ಘಟನಾ ಸ್ಥಳದ ಪಕ್ಕದಲ್ಲಿರುವ ಮಹೇಶ್‌ಪುರ ಪ್ರದೇಶದಲ್ಲಿ ಸುಮಾರು 300 ಮೀನಿನ ಪಂಜರಗಳಿವೆ ಮತ್ತು ಸುಮಾರು ಒಂದೂವರೆ ಟನ್ ಮೀನುಗಳನ್ನು ಸಾಕಲಾಗುತ್ತಿದೆ. ಆದರೆ, ಅವೆಲ್ಲವೂ ಸುರಕ್ಷಿತವಾಗಿವೆ ಎಂದು ಚೌಧರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT