ನೂತನ ಸಂಸತ್ ಕಟ್ಟಡದಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್. 
ದೇಶ

ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಸೋಮವಾರದಿಂದ ಆರಂಭವಾಗುವ ವಿಶೇಷ ಅಧಿವೇಶನ ಕಲಾಪಗಳು ನೂತನ ಕಟ್ಟಡದಲ್ಲೇ ನಡೆಯಲಿವೆ. ಧ್ವಜಾರೋಹಣ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು.

ಸಮಾರಂಭದ ನಂತರ ಮಾತನಾಡಿದ ಉಪರಾಷ್ಟ್ರಪತಿಗಳು,​ "ಭಾರತ ಯುಗಾಂತರದ ಬದಲಾವಣೆಗೆ ಸಾಕ್ಷಿಯಾಗಿದೆ. ಇಡೀ ವಿಶ್ವವೇ ಭಾರತದ ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುತ್ತಿದೆ. ನಾವು ಅದ್ಭುತ ಅಭಿವೃದ್ಧಿ, ಸಾಧನೆಗಳನ್ನು ನೋಡುತ್ತಿರುವ ಕಾಲದಲ್ಲಿ ಬದುಕುತ್ತಿದ್ದೇವೆ ಎಂದು ಹೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ, ಕೇಂದ್ರ ಸಚಿವರಾದ ವಿ.ಮುರಳೀಧರನ್, ಪಿಯೂಷ್ ಗೋಯಲ್, ಅರ್ಜುನ್ ರಾಮ್ ಮೇಘವಾಲ್, ಕಾಂಗ್ರೆಸ್ ಸಂಸದರಾದ ಅಧೀರ್ ರಂಜನ್ ಚೌಧರಿ ಮತ್ತು ಪ್ರಮೋದ್ ತಿವಾರಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶನಿವಾರ ತಿಳಿಸಿದ್ದರು. ಇದೇ ವೇಳೆ, ತನಗೆ ಸಾಕಷ್ಟು ತಡವಾಗಿ ಆಹ್ವಾನ ಬಂದಿದ್ದಾಗಿ ಹೇಳಿದ್ದರು. ರಾಜ್ಯಸಭೆ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು ಖರ್ಗೆ ಪತ್ರ ಬರೆದಿದ್ದರು.

ಸೆಪ್ಟೆಂಬರ್ 15ರ ಸಂಜೆ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಸಂಸತ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ನಿಮ್ಮ ಆಹ್ವಾನವನ್ನು ನಾನು ಸೆಪ್ಟೆಂಬರ್ 15, 2023 ರಂದು ಸಂಜೆ ತಡವಾಗಿ ಸ್ವೀಕರಿಸಿದ್ದೇನೆ ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT