ಗಿರೀಶ್ ಬಾಬು 
ದೇಶ

ಕೇರಳ ಸಿಎಂ ಪುತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದ ಕಾರ್ಯಕರ್ತ ಗಿರೀಶ್ ಬಾಬು ಶವ ಪತ್ತೆ, ಹೃದಯಾಘಾತ ಶಂಕೆ!

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಬಾಬು ಸೋಮವಾರ ಬೆಳಗ್ಗೆ ಕಲಮಶ್ಶೇರಿಯಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಬಾಬು ಸೋಮವಾರ ಬೆಳಗ್ಗೆ ಕಲಮಶ್ಶೇರಿಯಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗಿರೀಶ್ ಅವರು ಆರೋಗ್ಯ ಸಂಬಂಧಿ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನು ಅವರು ಕಳೆದ ತಿಂಗಳು ಫೇಸ್‌ಬುಕ್ ಪೋಸ್ಟ್ ಮೂಲಕ ಪ್ರಕಟಿಸಿದರು. ಇನ್ನು ಪೊಲೀಸರು ಗಿರೀಶ್ ಮನೆಗೆ ಆಗಮಿಸಿ ವಿಚಾರಣೆ ಆರಂಭಿಸಿದ್ದಾರೆ.

ಗಿರೀಶ್ ತನ್ನ ಕುಟುಂಬದೊಂದಿಗೆ ಕಲಮಸ್ಸೆರಿಯಲ್ಲಿ ವಾಸಿಸುತ್ತಿದ್ದು, ಇಂದು ಬೆಳಗ್ಗೆ ಆತನ ಪತ್ನಿಯೇ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಹೃದಯ ಸ್ತಂಭನದ ಪ್ರಕರಣದಂತೆ ತೋರುತ್ತಿದೆ. ಆದರೆ, ಶವಪರೀಕ್ಷೆ ವರದಿಯ ಆಧಾರದ ಮೇಲೆ ನಾವು ಅಂತಿಮ ತೀರ್ಮಾನಕ್ಕೆ ಬರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಿರೀಶ್ ಅವರು ಸಲ್ಲಿಸಿರುವ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೇರಳದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದವು. ಪಲರಿವಟ್ಟಂ ಫ್ಲೈಓವರ್ ಹಗರಣ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ವಿರುದ್ಧದ 'ಮಾಸಿಕ ಪಾವತಿ' ಆರೋಪಗಳು ಸೇರಿದಂತೆ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಸುದ್ದಿ ಮಾಡಿದ್ದವು. 

ವೀಣಾ ವಿಜಯನ್‌ಗೆ ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ನೀಡಿದ ಲಂಚದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅವರು ಮುವಾಟ್ಟುಪುಳದ ವಿಜಿಲೆನ್ಸ್ ನ್ಯಾಯಾಲಯಕ್ಕೆ ತೆರಳಿದರು. ಆದರೆ, ನ್ಯಾಯಾಲಯ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಅವರು ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮೊರೆ ಹೋಗಿದ್ದರು. ಗಿರೀಶ್ ಅವರ ಅರ್ಜಿಯನ್ನು ಕೋರ್ಟ್ ಇಂದು ಪರಿಗಣಿಸುವ ಹಂತದಲ್ಲಿದ್ದಾಗ ಅವರ ಸಾವು ಸಂಭವಿಸಿದೆ.

ನವದೆಹಲಿಯ ಆದಾಯ ತೆರಿಗೆ ಮಧ್ಯಂತರ ವಸಾಹತು ಮಂಡಳಿ(ಐಟಿಐಬಿಎಸ್) ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ತನಿಖೆಗೆ ಕೋರಿರುವ ಗಿರೀಶ್, ಸಿಎಂ ಮತ್ತು ಯುಡಿಎಫ್ ಮುಖಂಡರಾದ ರಮೇಶ್ ಚೆನ್ನಿತ್ತಲ, ಪಿ ಕೆ ಕುನ್ಹಾಲಿಕುಟ್ಟಿ ಮತ್ತು ವಿ ಕೆ ಇಬ್ರಾಹಿಂಕುಂಜು ಲಂಚ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT