ಹೆಚ್ ಡಿ ದೇವೇಗೌಡ 
ದೇಶ

ಕಾವೇರಿ ವಿವಾದ: ಪರಸ್ಪರ ಮಾತುಕತೆ ಮೂಲಕ ಮಾತ್ರ ಪರಿಹರಿಸಲು ಸಾಧ್ಯ- ಹೆಚ್. ಡಿ. ದೇವೇಗೌಡ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ರಾಜ್ಯಸಭೆಯಲ್ಲಿ 'ಸಂವಿಧಾನ ಸಭೆಯಿಂದ ಆರಂಭವಾದ 75 ವರ್ಷಗಳ ಸಂಸತ್ತಿನ ಪಯಣ-- ಸಾಧನೆ, ಅನುಭವ, ನೆನಪುಗಳು ಮತ್ತು ಕಲಿಕೆ' ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಗೌಡರು, ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ .ನೆರೆಯ ರಾಜ್ಯದ ಕೆಲವು ಗೆಳೆಯರು ಕಾವೇರಿ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ.  ಕಳೆದ 60 ವರ್ಷಗಳಿಂದ ಈ ಸಮಸ್ಯೆ ಇದ್ದು,  ಕಾನೂನಾತ್ಮಕವಾಗಿ ಬಗೆಹರಿಯುವುದಿಲ್ಲ ಎಂದರು. 

"ನಮ್ಮ ಸ್ನೇಹಿತರು ಸುಗಮ ರೀತಿಯ ಸಮಸ್ಯೆ ಪರಿಹರಿಸಲು ಬಯಸಿದರೆ, ನಾವೆಲ್ಲರೂ ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸೋಣ ಇಲ್ಲದಿದ್ದರೆ ವಿವಾದ ಮುಂದುವರಿಯುತ್ತದೆ ಮತ್ತು ಎರಡೂ ಕಡೆಯಿಂದ ಹೋರಾಟ ಮುಂದುವರಿಯುತ್ತದೆ. ನಾವು ಒಟ್ಟಿಗೆ ಕುಳಿತು ಬಿಕ್ಕಟ್ಟು ಬಗೆಹರಿಸಲು  ಪ್ರಯತ್ನಿಸದ ಹೊರತು ಈ ಸಮಸ್ಯೆಯನ್ನು ಪರಿಹರಿಸಲಾಗದು, ಕಾನೂನಾತ್ಮಕವಾಗಿ ಖಂಡಿತವಾಗಿಯೂ ವಿವಾದ ಬಗೆಹರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. 

ಕರ್ನಾಟಕ ರಾಜ್ಯ ಮಳೆಯಿಲ್ಲದೆ  ಬರ ಪರಿಸ್ಥಿತಿಯಿರುವುದರಿಂದ ಸಂಕಷ್ಟದಲ್ಲಿರುವ  ಜನರ ಪರ ನಿಂತಿದ್ದೇನೆ. “ಕರ್ನಾಟಕ ಅಥವಾ ತಮಿಳುನಾಡಿಗೆ ಸೇರದ ಈ ಸದನದ ಎರಡೂ ಕಡೆಯ ಐವರು ಸದಸ್ಯರನ್ನು ನೀವು ( ರಾಜ್ಯಸಭಾ ಸದಸ್ಯ ಜಗದೀಪ್ ಧನಕರ್) ನಿಯೋಜಿಸಿ, ಅವರು ಹೋಗಿ ಜನರ ಸ್ಥಿತಿ ಏನಾಗಿದೆ ಎಂಬುದನ್ನು ನೋಡಿ ನಂತರ ಈ ಸದನಕ್ಕೆ ವರದಿ ಮಾಡಲಿ, ನಾನು ಒಪ್ಪಿಕೊಳ್ಳುತ್ತೇನೆ. ಅನಾವಶ್ಯಕವಾಗಿ ಜಗಳ ಮಾಡಿಕೊಳ್ಳುವುದು ಬೇಡ  ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT