ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿ 
ದೇಶ

ಹಳಸಿದ ಸಂಬಂಧ: ಭಾರತ ತಿರುಗೇಟು; ಕೆನಡಾ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ; ದೇಶ ತೊರೆಯುವಂತೆ ಸೂಚನೆ

ಸಿಖ್‌ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.

ನವದೆಹಲಿ: ಸಿಖ್‌ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.

ಏಟಿಗೆ ಏದಿರೇಟು ಎಂಬಂತೆ ಭಾರತ ಸರ್ಕಾರ ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.

ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಇಂದು ಕರೆಸಿ, ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು.

ಈ ವೇಳೆ ಮುಂದಿನ ಐದು ದಿನದೊಳಗೆ ಭಾರತವನ್ನು ತೊರೆಯುವಂತೆ ಸಂಬಂಧಪಟ್ಟ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ ನಡೆದ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್‌ ಟ್ರುಡೊ, ‘ಖಾಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತೀಯ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ’ ಎಂದು ಹೇಳಿದ್ದರು.

ಜಸ್ಟಿನ್ ಟ್ರಡೋ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ. ಇಂದು ಭಾರತದ ಹಿರಿಯ ಗುಪ್ತಚರ ಅಧಿಕಾರಿಯನ್ನು ಕೆನಡಾದಿಂದ ಉಚ್ಚಾಟನೆ ಮಾಡಲಾಗಿದೆ. ಇವರು ಭಾರತದ ವಿದೇಶಿ ಗುಪ್ತಚರ ಸಂಸ್ಥೆ ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ (RAW)ನ ಮುಖ್ಯಸ್ಥರಾಗಿದ್ದರು’ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಭಾರತ ನಿರಾಕರಿಸಿದ್ದು, ಕೆನಡಾ ಸಂಸತ್ತಿನಲ್ಲಿ ಆ ರಾಷ್ಟ್ರದ ಪ್ರಧಾನಿ ನೀಡಿರುವ ಹೇಳಿಕೆಯನ್ನು ನೋಡಿದ್ದೇವೆ. ಕೆನಡಾ ಪ್ರಧಾನಿ ಹಾಗೂೂ ಕೆನಡಾ ರಾಷ್ಟ್ರದ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆಯನ್ನು ತಿರಸ್ಕರಿಸುತ್ತಿದ್ದೇವೆ. ಕೆನಡಾದಲ್ಲಿ ಯಾವುದೇ ಹಿಂಸಾಚಾರದಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂಬ ಆರೋಪಗಳು ಅಸಂಬದ್ಧವಾದದ್ದು. ನಾವು ಕಾನೂನಿನ ಆಳ್ವಿಕೆಗೆ ಬದ್ಧತೆ ಹೊಂದಿರುವ ಪ್ರಜಾಸತ್ತಾತ್ಮಕ ರಾಜಕೀಯ ಹೊಂದಿದ್ದೇವೆಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ