ಸಂಗ್ರಹ ಚಿತ್ರ 
ದೇಶ

ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ: ನಮ್ಮದು ಪ್ರಜಾಸತ್ತಾತ್ಮಕ ದೇಶ, ಕಾನೂನಿನ ನಿಯಮಕ್ಕೆ ಬದ್ಧತೆ ಇದೆ; ಕೆನಡಾ ಆರೋಪ ನಿರಾಕರಿಸಿದ ಭಾರತ

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ್ದು, ಆರೋಪದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ಆರೋಪವನ್ನು ಭಾರತ ನಿರಾಕರಿಸಿದೆ,

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ್ದು, ಆರೋಪದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ಆರೋಪವನ್ನು ಭಾರತ ನಿರಾಕರಿಸಿದೆ.

ಕೆನಡಾದ ಆರೋಪ ಕುರಿತು ಭಾರತದ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಇಂತಹ ಆರೋಪಗಳು ನಮ್ಮ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುತ್ತಿರುವ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗುತ್ತವೆ ಎಂದು ಹೇಳಿದೆ.

ಕೆನಡಾ ಸಂಸತ್ತಿನಲ್ಲಿ ಆ ರಾಷ್ಟ್ರದ ಪ್ರಧಾನಿ ನೀಡಿರುವ ಹೇಳಿಕೆಯನ್ನು ನೋಡಿದ್ದೇವೆ. ಕೆನಡಾ ಪ್ರಧಾನಿ ಹಾಗೂೂ ಕೆನಡಾ ರಾಷ್ಟ್ರದ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆಯನ್ನು ತಿರಸ್ಕರಿಸುತ್ತಿದ್ದೇವೆ. ಕೆನಡಾದಲ್ಲಿ ಯಾವುದೇ ಹಿಂಸಾಚಾರದಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂಬ ಆರೋಪಗಳು ಅಸಂಬದ್ಧವಾದದ್ದು. ನಾವು ಕಾನೂನಿನ ಆಳ್ವಿಕೆಗೆ ಬದ್ಧತೆ ಹೊಂದಿರುವ ಪ್ರಜಾಸತ್ತಾತ್ಮಕ ರಾಜಕೀಯ ಹೊಂದಿದ್ದೇವೆಂದು ತಿಳಿಸಿದೆ.

ಇಂತಹ ಆಧಾರರಹಿತ ಆರೋಪಗಳು ಕೆನಡಾದಲ್ಲಿ ಆಶ್ರಯ ಪಡೆದಿರುವ ಮತ್ತು ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಅಪಾಯ ಉಂಟುಮಾಡುವ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರರ ಗಮನವನ್ನು ಬೇರೆಡೆ ಸೆಳೆಯುತ್ತಿವೆ.

ಈ ವಿಷಯದ ಬಗ್ಗೆ ಕೆನಡಾ ಸರ್ಕಾರ ಕ್ರಮ ತೆಗೆದುಕೊಳ್ಳದಿರುವುದು ಚಿಂತೆಗೀಡು ಮಾಡುವ ವಿಚಾರವಾಗಿದೆ. ಕೆನಡಾದಲ್ಲಿ ಕೊಲೆ, ಮಾನವ ಕಳ್ಳಸಾಗಣೆ ಮತ್ತು ಸಂಘಟಿತ ಅಪರಾಧ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇದೇ ರೀತಿಯ ಆರೋಪಗಳನ್ನು ಕೆನಡಾದ ಪ್ರಧಾನಿಯವರು ನಮ್ಮ ಪ್ರಧಾನಿಯವರ ಮೇಲೆ ಮಾಡಿದ್ದು, ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ. ನಮ್ಮದು ಪ್ರಜಾಸತ್ತಾತ್ಮಕ ದೇಶವಾಗಿದ್ದು, ಕಾನೂನಿನ ನಿಯಮಕ್ಕೆ ಬಲವಾದ ಬದ್ಧತೆ ಇದೆ ಎಂದಿದೆ.

ಜೂನ್‌ನಲ್ಲಿ ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿತ್ತು. ಮೋಸ್ಟ್‌ ವಾಂಟೆಡ್ ಟೆರರಿಸ್ಟ್‌ ಪಟ್ಟಿಯಲ್ಲಿದ್ದ ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಜೂನ್‌ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜರ್‌ ಮೇಲೆ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪವಿತ್ತು.

ಸೋಮವಾರ ಮಧ್ಯಾಹ್ನ ನಡೆದ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್‌ ಟ್ರುಡೊ, ‘ಖಾಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತೀಯ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ’ ಎಂದು ಹೇಳಿದ್ದರು.

ಜಸ್ಟಿನ್ ಟ್ರಡೋ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ. ಇಂದು ಭಾರತದ ಹಿರಿಯ ಗುಪ್ತಚರ ಅಧಿಕಾರಿಯನ್ನು ಕೆನಡಾದಿಂದ ಉಚ್ಚಾಟನೆ ಮಾಡಲಾಗಿದೆ. ಇವರು ಭಾರತದ ವಿದೇಶಿ ಗುಪ್ತಚರ ಸಂಸ್ಥೆ ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ (RAW)ನ ಮುಖ್ಯಸ್ಥರಾಗಿದ್ದರು’ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT