ನೂತನ ಸಂಸತ್ ಭವನ ಪ್ರವೇಶಿಸುತ್ತಿರುವ ಪ್ರಧಾನಿ ಮೋದಿ. 
ದೇಶ

ಹೊಸ ಸಂಸತ್ ಭವನಕ್ಕೆ ಪ್ರವೇಶ: ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಮೋದಿ ಸಾಥ್, ವಿಶೇಷ ಅಧಿವೇಶನ ಆರಂಭ

ಹೊಸ ಸಂಸತ್ ಭವನಕ್ಕೆ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಪ್ರವೇಶಿಸಿದ್ದು, ಈ ವೇಳೆ ಕೇಂದ್ರ ಸಚಿವರು ಮತ್ತು ಇತರ ಸಂಸದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ನೂತನ ಕಟ್ಟಡದೊಳಗೆ ಆಗಮಿಸಿದರು. ಇದರೊಂದಿಗೆ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭಗೊಂಡಿದೆ.

ನವದೆಹಲಿ: ಹೊಸ ಸಂಸತ್ ಭವನಕ್ಕೆ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಪ್ರವೇಶಿಸಿದ್ದು, ಈ ವೇಳೆ ಕೇಂದ್ರ ಸಚಿವರು ಮತ್ತು ಇತರ ಸಂಸದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ನೂತನ ಕಟ್ಟಡದೊಳಗೆ ಆಗಮಿಸಿದರು. ಇದರೊಂದಿಗೆ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭಗೊಂಡಿದೆ.

ಮೊದಲ ದಿನದ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪಗಳು ಹಳೆ ಸಂಸತ್ತಿನ ಭವನದಲ್ಲಿ ಜರುಗಿದ್ದವು. ಇಂದಿನಿಂದ ಹೊಸ ಭವನದಲ್ಲಿ ಕಲಾಪಗಳು ಶುರುವಾಗಿವೆ. ಇದರ ಭಾಗವಾಗಿ ಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್‌ನಲ್ಲಿ ವಿದಾಯ ಕಾರ್ಯಕ್ರಮ ನಡೆಯಿತು. ಇದರಲ್ಲಿ ಎರಡೂ ಸದನಗಳ ಸದಸ್ಯರು ಪಾಲ್ಗೊಂಡರು. ನಂತರ ಸಂಸತ್ ಸಂಕೀರ್ಣಕ್ಕೆ ಎಲ್ಲರೂ ಆಗಮಿಸಿದರು.

ಪ್ರಧಾನಿ ಮೋದಿ ಅವರೊಂದಿಗೆ ಹಲವಾರು ಸಂಸದರು ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ನಡೆದುಕೊಂಡು ಬಂದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಸೇರಿದಂತೆ ಅನೇಕರು ಆಗಮಿಸಿದರು. ಇದೇ ವೇಳೆ, ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಸಂಸದರು 'ಭಾರತ್ ಮಾತಾ ಕಿ ಜೈ' ಮತ್ತು 'ವಂದೇ ಮಾತರಂ' ಎಂಬ ಘೋಷಣೆಗಳನ್ನು ಕೂಗುತ್ತಾ ಅವರನ್ನು ಹಿಂಬಾಲಿಸಿದರು.

ಮತ್ತೊಂದೆಡೆ, ಹಲವಾರು ಪ್ರತಿಪಕ್ಷಗಳ ಸಂಸದರು ಕೂಡ ಹೊಸ ಸಂಸತ್ತಿನ ಸಂಕೀರ್ಣದ ಕಡೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ಪ್ರತ್ಯೇಕವಾಗಿ ಹೊಸ ಸಂಸತ್ತಿಗೆ ಪ್ರವೇಶಿಸಿದರು. ನಂತರ ಲೋಕಸಭೆ ಕಲಾಪ ಆರಂಭವಾಯಿತು.

ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು,''ನೂತನ ಸಂಸತ್ ಭವನದ ಮೊದಲ ಹಾಗೂ ಐತಿಹಾಸಿಕ ಅಧಿವೇಶನ ಇದಾಗಿದೆ. ಈ ಹೊಸ ಸಂಸತ್ ಭವನದಲ್ಲಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಈ ಸಂದರ್ಭ ಹಲವಾರು ವಿಧಗಳಲ್ಲಿ ಅಭೂತಪೂರ್ವವಾಗಿದೆ. ಇದು ಆಜಾದಿ ಕಾ ಅಮೃತ್‌ ಕಾಲ್" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT