ಅಪಘಾತಕ್ಕೀಡಾದ ಬಸ್ 
ದೇಶ

ಪಂಜಾಬ್: ಖಾಸಗಿ ಬಸ್ ಕಾಲುವೆಗೆ ಬಿದ್ದು, 8 ಪ್ರಯಾಣಿಕರು ದುರ್ಮರಣ

ಪಂಜಾಬಿನ ಮುಕ್ತಸರ ಜಿಲ್ಲೆಯ ಸರ್ ಹಿಂದ್ ಫೀಡರ್ ಕಾಲುವೆಗೆ ಸುಮಾರು 35 ಜನರಿದ್ದ ಖಾಸಗಿ ಬಸ್ ವೊಂದು ಬಿದ್ದು, ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡೀಘಡ: ಪಂಜಾಬಿನ ಮುಕ್ತಸರ ಜಿಲ್ಲೆಯ ಸರ್ ಹಿಂದ್ ಫೀಡರ್ ಕಾಲುವೆಗೆ ಸುಮಾರು 35 ಜನರಿದ್ದ ಖಾಸಗಿ ಬಸ್ ವೊಂದು ಬಿದ್ದು, ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಕ್ತಸರ- ಕೊಟ್ಕಾಪುರ ರಸ್ತೆಯ ಝಬೆಲ್ವಾಲಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.ಬ್ರೇಕ್ ಹಾಕಿದಾಗ ಬಸ್ ಸ್ಕಿಡ್ ಆಗಿ ಈ ಅಪಘಾತ ಸಂಭವಿಸಿದೆ. ಘಟನೆಯ ಸಮಯದಲ್ಲಿ ಮಳೆ ಸುರಿಯುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಬಸ್ ಮುಕ್ತಸರದಿಂದ ಕೊಟ್ಕಾಪುರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಕರೆಸಲಾಗಿದೆ. ಕಾಲುವೆಯಲ್ಲಿ ನೀರಿನಪ್ರವಾಹದಿಂದ ಕೆಲವು ಪ್ರಯಾಣಿಕರು ಕೊಚ್ಚಿ ಹೋಗಿರಬಹುದು ಎಂಬ ಆತಂಕವಿದೆ. ಅವರನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಮುಕ್ತ್ಸಾರ್ ಡೆಪ್ಯುಟಿ ಕಮಿಷನರ್ ರುಹೀ ಡಗ್ ಹೇಳಿದ್ದಾರೆ.

ಕ್ರೇನ್ ಸಹಾಯದಿಂದ ಬಸ್ ನ್ನು ಕಾಲುವೆಯಿಂದ ಹೊರತೆಗೆಯಲಾಗಿದ್ದು, ಗಾಯಗೊಂಡಿರುವ ಕೆಲ ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ಆಡಳಿತದ ತಂಡಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಬಗ್ಗೆ ನಿಯಮಿತವಾಗಿ ನವೀಕರಣಗಳನ್ನು ಪಡೆಯುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT