ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್ 
ದೇಶ

'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!

ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.

ನವದೆಹಲಿ: ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.

ರಾಷ್ಟ್ರ ರಾಜಧಾನಿಯಲ್ಲಿರುವ ಡ್ಯಾನಿಶ್ ಅಲಿ ಅವರ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡ್ಯಾನಿಶ್ ಅಲಿ ಅವರನ್ನು ತಬ್ಬಿಕೊಳ್ಳುವ ಮೂಲಕ ಅವರಿಗೆ ಪ್ರೀತಿಯನ್ನು ತೋರಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ (ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕಿ ದುಕಾನ್) ಎಂದು ಹೇಳಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಡ್ಯಾನಿಶ್ ಅಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಡ್ಯಾನಿಶ್ ಅಲಿ ವಿರುದ್ಧ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿರೋಧ ಪಕ್ಷಗಳ ಕೋಪಕ್ಕೆ ಕಾರಣವಾಗಿದ್ದು, ಬಿಧುರಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಸ್ಪೀಕರ್ ಈ ಬಗ್ಗೆ ವಿಚಾರಣೆ ನಡೆಸದಿದ್ದರೆ ಸಂಸತ್ತನ್ನು ತೊರೆಯುವುದಾಗಿ INDIA ಮೈತ್ರಿಕೂಟ ಎಚ್ಚರಿಕೆ ನೀಡಿದೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ಪಿ ನಾಯಕ, ದಕ್ಷಿಣ ದೆಹಲಿಯ ಬಿಜೆಪಿ ಸಂಸದ ಬಿಧುರಿ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಇಡೀ ರಾಷ್ಟ್ರವನ್ನು ಅವಮಾನಿಸಿದ್ದಾರೆ. ರಮೇಶ್ ಬಿಧುರಿ ವಿರುದ್ಧ ಬಿಜೆಪಿ ಯಾವ ಕ್ರಮ ತೆಗೆದುಕೊಳ್ಳುತ್ತದೆಯೇ ಅಥವಾ ಅವರನ್ನು ಬಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸುತ್ತದೆಯೇ ಎಂಬುದು ಕಾದು ನೋಡಬೇಕಾದ ವಿಷಯವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT