ವರುಣ್ ಗಾಂಧಿ 
ದೇಶ

ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆ ಪರವಾನಗಿ ಅಮಾನತು ಮರುಪರಿಶೀಲಿಸಿ: ಯುಪಿ ಸರ್ಕಾರಕ್ಕೆ ವರುಣ್ ಗಾಂಧಿ

ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಿಗೆಯನ್ನು ಅಮಾನತುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಿಗೆಯನ್ನು ಅಮಾನತುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಂಪೂರ್ಣ ತನಿಖೆ ನಡೆಸದೆ "ತ್ವರಿತವಾಗಿ ಅಮಾನತು" ಮಾಡುವ ನಿರ್ಧಾರ  ಸರಿಯಲ್ಲ. ಇದು ಘೋರ ಅನ್ಯಾಯ ಎಂದು ಆಡಳಿತರೂಢ ಪಕ್ಷದ ಸಂಸದ ಹೇಳಿದ್ದಾರೆ.

ಈ ಸಂಬಂಧ ವರುಣ್ ಗಾಂಧಿ ಅವರು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರಿಗೆ ಪತ್ರ ಬರೆದಿದ್ದು, ಹೆಚ್ಚಿನ ಸಂಖ್ಯೆಯ ಜನ ಪ್ರಾಥಮಿಕ ಆರೋಗ್ಯ ಸೇವೆಗಳಿಗಾಗಿ ಈ ಆಸ್ಪತ್ರೆಯನ್ನು ಅವಲಂಬಿಸಿರುವುದರಿಂದ ಪರವಾನಿಗೆ ಅಮಾನತುಗೊಳಿಸಿದರೆ ಈ ಪ್ರದೇಶದ ಆರೋಗ್ಯ ಸೇವೆ, ಉದ್ಯೋಗ ಮತ್ತು ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಲೋಕಸಭಾ ಸಂಸದರಾಗಿ ವರುಣ್ ಗಾಂಧಿ ಅವರು ಆಯ್ಕೆಯಾದ ನಂತರ ಅವರ ತಂದೆಯ ಹೆಸರನ್ನು ಆಸ್ಪತ್ರೆಗೆ ಇಡಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅಮೇಥಿ ಆಸ್ಪತ್ರೆಯನ್ನು ನಡೆಸುತ್ತಿರುವ ಸಂಜಯ್ ಗಾಂಧಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟ್ರಸ್ಟ್‌ನ ಸದಸ್ಯರಾಗಿದ್ದಾರೆ.

"ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಿಗೆಯನ್ನು ಸಂಪೂರ್ಣ ತನಿಖೆ ನಡೆಸದೆ ತ್ವರಿತವಾಗಿ ಅಮಾನತುಗೊಳಿಸಿರುವುದು ಪ್ರಾಥಮಿಕ ಆರೋಗ್ಯ ಸೇವೆಗಳಿಗೆ ಮಾತ್ರವಲ್ಲದೆ ತಮ್ಮ ಜೀವನೋಪಾಯಕ್ಕಾಗಿ ಸಂಸ್ಥೆಯನ್ನು ಅವಲಂಬಿಸಿರುವ ಎಲ್ಲರಿಗೂ ಅನ್ಯಾಯವಾಗಿದೆ" ಎಂದು ವರುಣ್ ಗಾಂಧಿ ಹೇಳಿದ್ದಾರೆ.

ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಗಿ ಅಮಾನತುಗೊಳಿಸುವ ನಿರ್ಧಾರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ಸಹ ಒತ್ತಾಯಿಸಿದೆ. ಆದರೆ ಮಹಿಳೆಯ ಸಾವಿನ ತನಿಖೆಯ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ಪಾಠಕ್ ಅವರು ಗುರುವಾರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್