ಡ್ಯಾನಿಶ್ ಅಲಿ 
ದೇಶ

ಬಿಜೆಪಿ ಸಂಸದ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಸದ ಸ್ಥಾನ ತ್ಯಜಿಸುತ್ತೇನೆ: ಡ್ಯಾನಿಶ್ ಅಲಿ

ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ...

ನವದೆಹಲಿ: ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಅವರು ಶುಕ್ರವಾರ ಹೇಳಿದ್ದಾರೆ.

ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಕಿಡಿ ಕಾರಿದ ಡ್ಯಾನಿಶ್ ಅಲಿ, "ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನು ಸ್ಪೀಕರ್‌ಗೆ ಪತ್ರ ಬರೆದಿದ್ದೇನೆ. ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ" ಎಂದಿದ್ದಾರೆ.

"ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಇಲ್ಲ. ಇದು ಸದನದಲ್ಲಿ ನಡೆದ ದ್ವೇಷದ ಭಾಷಣವಾಗಿದೆ. ಇಷ್ಟು ದಿನ ಸಂಸತ್ತಿನ ಹೊರಗೆ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸಂಸದ ಸದನದೊಳಗೇ ದ್ವೇಷ ಭಾಷಣ ಮಾಡಿದ್ದಾರೆ" ಎಂದು ಡ್ಯಾನಿಶ್ ಅಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನೀವು ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅಲಿ, "ಸ್ಪೀಕರ್ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ಕ್ರಮ ಕೈಗೊಳ್ಳದಿದ್ದರೆ, ಭಾರವಾದ ಹೃದಯದಿಂದ ನನ್ನ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಯೋಚಿಸುತ್ತೇನೆ. ಏಕೆಂದರೆ ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಸಂಸತ್ತಿಗೆ ಕಳುಹಿಸಿಲ್ಲ ಎಂದಿದ್ದಾರೆ.

ಭಾರತದ ಚಂದ್ರಯಾನ-3 ರ ಯಶಸ್ಸಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ, ಉಗ್ರಗಾಮಿ ಮತ್ತು ಪಿಂಪ್ ಎಂದು ನಿಂದಿಸಿದ್ದರು.

ಈ 'ಮುಲ್ಲಾ' ನನ್ನು ಹೊರಹಾಕಿ. "ಈ ಮುಲ್ಲಾ ಒಬ್ಬ ಭಯೋತ್ಪಾದಕ" ಎಂದು ಬಿಧುರಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT