ಸಿಂಗಂ ಸಿನಿಮಾ ಸ್ಟಿಲ್ 
ದೇಶ

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.

ಮುಂಬೈ: 'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ.

ಇಂಡಿಯನ್ ಪೊಲೀಸ್ ಫೌಂಡೇಶನ್ ತನ್ನ ವಾರ್ಷಿಕ ದಿನ ಮತ್ತು ಪೊಲೀಸ್ ಸುಧಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಕಾನೂನಿನ ಪ್ರಕ್ರಿಯೆಯ ಬಗ್ಗೆ ಜನರು ವ್ಯಕ್ತಪಡಿಸುತ್ತಿರುವ ಅಸಹನೆಯ ಬಗ್ಗೆ ಉಲ್ಲೇಖಿಸಿದ್ದಾರೆ.

ಚಲನಚಿತ್ರಗಳಲ್ಲಿ ಅಂಜುಬುರುಕ, ದಪ್ಪ ಕನ್ನಡಕ ಮತ್ತು ಸಾಮಾನ್ಯವಾಗಿ ತುಂಬಾ ಕೆಟ್ಟ ರೀತಿಯಲ್ಲಿ ವಸ್ತ್ರ ಧರಿಸಿರುವ ನ್ಯಾಯಾಧೀಶರ ವಿರುದ್ಧ ಪೊಲೀಸರು ಹರಿಹಾಯುವುದನ್ನು ತೋರಿಸಲಾಗುತ್ತದೆ. ನ್ಯಾಯಾಧೀಶರು ತಪ್ಪಿತಸ್ಥರನ್ನು ಹೋಗಲು ಬಿಡುತ್ತಾರೆ ಎಂದು ಅವರು ನ್ಯಾಯಾಲಯಗಳನ್ನು ದೂಷಿಸಿ, ಪೊಲೀಸ್ ನಾಯಕ ಏಕಾಂಗಿಯಾಗಿ ನ್ಯಾಯವನ್ನು ನೀಡುವವನಂತೆ ತೋರಿಸಲಾಗುತ್ತದೆ" ಎಂದು ಅವರು ಹೇಳಿದರು. ನಮ್ಮನ್ನು ನಾವು ಸುಧಾರಿಸಿಕೊಳ್ಳದ ಹೊರತು ಕಾನೂನು ಜಾರಿ ಯಂತ್ರವನ್ನು ಸುಧಾರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಪೋಲೀಸರು ಎಂದರೆ ಬೆದರಿಸುವವರು, ಭ್ರಷ್ಟರು ಮತ್ತು ಜವಾಬ್ದಾರಿ ಇಲ್ಲದವರು ಎಂಬ ಚಿತ್ರಣವು ಜನರ ನಡುವೆ ಇದೆ. ನ್ಯಾಯಾಧೀಶರು, ರಾಜಕಾರಣಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ಜೀವನದಲ್ಲಿರುವ ಯಾರಿಗಾದರೂ ಅದನ್ನೇ ಹೇಳಬಹುದು ಎಂದು ಅವರು ಹೇಳಿದರು. ನ್ಯಾಯಾಲಯಗಳು ತಮ್ಮ ಕೆಲಸವನ್ನು ಮಾಡುತ್ತಿಲ್ಲ ಎಂದು ಭಾವಿಸುವ ಸಾರ್ವಜನಿಕರು, ಪೊಲೀಸರು ಮಧ್ಯಪ್ರವೇಶಿಸುವುದನ್ನು ಸಂಭ್ರಮಿಸಲ್ಪಡಲಾಗುತ್ತಿದೆ ಎಂದು ನ್ಯಾಯಾಧೀಶರು ಗಮನ ಸೆಳೆದರು.

ಇದಕ್ಕಾಗಿಯೇ ಅತ್ಯಾಚಾರ ಆರೋಪಿಯು ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರೆ, ಜನರು ಅದು ಪರವಾಗಿಲ್ಲ ಎಂದು ಭಾವಿಸುತ್ತಾರೆ, ಹಾಗೂ ಅದನ್ನು ಸಂಭ್ರಮಾಚರಿಸಲಾಗುತ್ತದೆ. ನ್ಯಾಯವನ್ನು ನೀಡಲಾಗಿದೆ ಅವರು ಭಾವಿಸುತ್ತಾರೆ, ಆದರೆ ಅದು ಹಾಗೆ ಇದೆಯೇ?" ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT