ಸಿಂಗಂ ಸಿನಿಮಾ ಸ್ಟಿಲ್ 
ದೇಶ

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ ಬೇಸರ

'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.

ಮುಂಬೈ: 'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ.

ಇಂಡಿಯನ್ ಪೊಲೀಸ್ ಫೌಂಡೇಶನ್ ತನ್ನ ವಾರ್ಷಿಕ ದಿನ ಮತ್ತು ಪೊಲೀಸ್ ಸುಧಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಕಾನೂನಿನ ಪ್ರಕ್ರಿಯೆಯ ಬಗ್ಗೆ ಜನರು ವ್ಯಕ್ತಪಡಿಸುತ್ತಿರುವ ಅಸಹನೆಯ ಬಗ್ಗೆ ಉಲ್ಲೇಖಿಸಿದ್ದಾರೆ.

ಚಲನಚಿತ್ರಗಳಲ್ಲಿ ಅಂಜುಬುರುಕ, ದಪ್ಪ ಕನ್ನಡಕ ಮತ್ತು ಸಾಮಾನ್ಯವಾಗಿ ತುಂಬಾ ಕೆಟ್ಟ ರೀತಿಯಲ್ಲಿ ವಸ್ತ್ರ ಧರಿಸಿರುವ ನ್ಯಾಯಾಧೀಶರ ವಿರುದ್ಧ ಪೊಲೀಸರು ಹರಿಹಾಯುವುದನ್ನು ತೋರಿಸಲಾಗುತ್ತದೆ. ನ್ಯಾಯಾಧೀಶರು ತಪ್ಪಿತಸ್ಥರನ್ನು ಹೋಗಲು ಬಿಡುತ್ತಾರೆ ಎಂದು ಅವರು ನ್ಯಾಯಾಲಯಗಳನ್ನು ದೂಷಿಸಿ, ಪೊಲೀಸ್ ನಾಯಕ ಏಕಾಂಗಿಯಾಗಿ ನ್ಯಾಯವನ್ನು ನೀಡುವವನಂತೆ ತೋರಿಸಲಾಗುತ್ತದೆ" ಎಂದು ಅವರು ಹೇಳಿದರು. ನಮ್ಮನ್ನು ನಾವು ಸುಧಾರಿಸಿಕೊಳ್ಳದ ಹೊರತು ಕಾನೂನು ಜಾರಿ ಯಂತ್ರವನ್ನು ಸುಧಾರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಪೋಲೀಸರು ಎಂದರೆ ಬೆದರಿಸುವವರು, ಭ್ರಷ್ಟರು ಮತ್ತು ಜವಾಬ್ದಾರಿ ಇಲ್ಲದವರು ಎಂಬ ಚಿತ್ರಣವು ಜನರ ನಡುವೆ ಇದೆ. ನ್ಯಾಯಾಧೀಶರು, ರಾಜಕಾರಣಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ಜೀವನದಲ್ಲಿರುವ ಯಾರಿಗಾದರೂ ಅದನ್ನೇ ಹೇಳಬಹುದು ಎಂದು ಅವರು ಹೇಳಿದರು. ನ್ಯಾಯಾಲಯಗಳು ತಮ್ಮ ಕೆಲಸವನ್ನು ಮಾಡುತ್ತಿಲ್ಲ ಎಂದು ಭಾವಿಸುವ ಸಾರ್ವಜನಿಕರು, ಪೊಲೀಸರು ಮಧ್ಯಪ್ರವೇಶಿಸುವುದನ್ನು ಸಂಭ್ರಮಿಸಲ್ಪಡಲಾಗುತ್ತಿದೆ ಎಂದು ನ್ಯಾಯಾಧೀಶರು ಗಮನ ಸೆಳೆದರು.

ಇದಕ್ಕಾಗಿಯೇ ಅತ್ಯಾಚಾರ ಆರೋಪಿಯು ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರೆ, ಜನರು ಅದು ಪರವಾಗಿಲ್ಲ ಎಂದು ಭಾವಿಸುತ್ತಾರೆ, ಹಾಗೂ ಅದನ್ನು ಸಂಭ್ರಮಾಚರಿಸಲಾಗುತ್ತದೆ. ನ್ಯಾಯವನ್ನು ನೀಡಲಾಗಿದೆ ಅವರು ಭಾವಿಸುತ್ತಾರೆ, ಆದರೆ ಅದು ಹಾಗೆ ಇದೆಯೇ?" ಅವರು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT