ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿ ದಹನ 
ದೇಶ

ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿ ದಹನ

ದೆಹಲಿಯಲ್ಲಿನ ಕೆಲವು ರಾಮಲೀಲಾ ಸಮಿತಿಗಳು ಈ ಬಾರಿಯ ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಿವೆ.

ನವದೆಹಲಿ: ದೆಹಲಿಯಲ್ಲಿನ ಕೆಲವು ರಾಮಲೀಲಾ ಸಮಿತಿಗಳು ಈ ಬಾರಿಯ ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಿವೆ.

ಸನಾತನ ಧರ್ಮದ ವಿರೋಧಿಗಳನ್ನು ರಾವಣ, ಕುಂಭಕರಣ, ಮೇಘನಾದನ ಸಾಲಿಗೆ ಸೇರಿಸಿ ಅವರ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಲಾಗಿದೆ.

ದೆಹಲಿ ಭಾರತೀಯ ಜನತಾ ಪಕ್ಷದ ನಾಯಕರು ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿರುವ ರಾಜಕಾರಣಿಗಳ ಪ್ರತಿಕೃತಿಗಳನ್ನು ಸುಡುವಂತೆ ಒತ್ತಾಯಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಸಮಿತಿಗಳ ಪದಾಧಿಕಾರಿಗಳು ಈ ಹಿಂದೆ ಹಣದುಬ್ಬರ, ಭ್ರಷ್ಟಾಚಾರ ಮತ್ತು ಮಾದಕ ವ್ಯಸನವನ್ನು ಬಿಂಬಿಸುವ ಪ್ರತಿಕೃತಿಗಳನ್ನು ಸುಟ್ಟು ಹಾಕಲಾಗಿದೆ ಹಾಗಾಗಿ ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಸೇರಿದಂತೆ ಹಲವು ರಾಜಕಾರಣಿಗಳು ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದು ವಿವಾದಕ್ಕೆ ಗುರಿಯಾಗಿತ್ತು.

ಶ್ರೀ ಧಾರ್ಮಿಕ ಲೀಲಾ ಸಮಿತಿಯ ಸಂಚಾಲಕ ರವಿ ಜೈನ್ ಮಾತನಾಡಿ, ದಸರಾ ಸಂದರ್ಭದಲ್ಲಿ ಸಮಾಜಘಾತುಕರ ಪ್ರತಿಕೃತಿ ದಹನ ಮಾಡುವುದು ನಮ್ಮ ಸಂಪ್ರದಾಯ, ರಾಮಲೀಲಾ ಸನಾತನ ಧರ್ಮದ ಅಂಗವಾಗಿರುವುದರಿಂದ ಈ ವರ್ಷ ಅದನ್ನು ವಿರೋಧಿಸುವವರ ಪ್ರತಿಕೃತಿ ದಹಿಸುತ್ತೇವೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT