ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿ ದಹನ 
ದೇಶ

ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿ ದಹನ

ದೆಹಲಿಯಲ್ಲಿನ ಕೆಲವು ರಾಮಲೀಲಾ ಸಮಿತಿಗಳು ಈ ಬಾರಿಯ ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಿವೆ.

ನವದೆಹಲಿ: ದೆಹಲಿಯಲ್ಲಿನ ಕೆಲವು ರಾಮಲೀಲಾ ಸಮಿತಿಗಳು ಈ ಬಾರಿಯ ದಸರಾದಲ್ಲಿ ಸನಾತನ ವಿರೋಧಿಗಳ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಿವೆ.

ಸನಾತನ ಧರ್ಮದ ವಿರೋಧಿಗಳನ್ನು ರಾವಣ, ಕುಂಭಕರಣ, ಮೇಘನಾದನ ಸಾಲಿಗೆ ಸೇರಿಸಿ ಅವರ ಪ್ರತಿಕೃತಿಗಳನ್ನು ದಹನ ಮಾಡಲು ನಿರ್ಧರಿಸಲಾಗಿದೆ.

ದೆಹಲಿ ಭಾರತೀಯ ಜನತಾ ಪಕ್ಷದ ನಾಯಕರು ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿರುವ ರಾಜಕಾರಣಿಗಳ ಪ್ರತಿಕೃತಿಗಳನ್ನು ಸುಡುವಂತೆ ಒತ್ತಾಯಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಸಮಿತಿಗಳ ಪದಾಧಿಕಾರಿಗಳು ಈ ಹಿಂದೆ ಹಣದುಬ್ಬರ, ಭ್ರಷ್ಟಾಚಾರ ಮತ್ತು ಮಾದಕ ವ್ಯಸನವನ್ನು ಬಿಂಬಿಸುವ ಪ್ರತಿಕೃತಿಗಳನ್ನು ಸುಟ್ಟು ಹಾಕಲಾಗಿದೆ ಹಾಗಾಗಿ ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಸೇರಿದಂತೆ ಹಲವು ರಾಜಕಾರಣಿಗಳು ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದು ವಿವಾದಕ್ಕೆ ಗುರಿಯಾಗಿತ್ತು.

ಶ್ರೀ ಧಾರ್ಮಿಕ ಲೀಲಾ ಸಮಿತಿಯ ಸಂಚಾಲಕ ರವಿ ಜೈನ್ ಮಾತನಾಡಿ, ದಸರಾ ಸಂದರ್ಭದಲ್ಲಿ ಸಮಾಜಘಾತುಕರ ಪ್ರತಿಕೃತಿ ದಹನ ಮಾಡುವುದು ನಮ್ಮ ಸಂಪ್ರದಾಯ, ರಾಮಲೀಲಾ ಸನಾತನ ಧರ್ಮದ ಅಂಗವಾಗಿರುವುದರಿಂದ ಈ ವರ್ಷ ಅದನ್ನು ವಿರೋಧಿಸುವವರ ಪ್ರತಿಕೃತಿ ದಹಿಸುತ್ತೇವೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT