ಸಾಂದರ್ಭಿಕ ಚಿತ್ರ 
ದೇಶ

ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್

ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್...

ಲಖನೌ: ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್ ಇಲಾಖೆಯನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.

ಗೋರಖ್‌ಪುರ ಮತ್ತು ಗೊಂಡಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಪೇದೆಗಳು ಇಂತಹದೊಂದು ಮನವಿ ಮಾಡಿದ್ದು, ಈ ಇಬ್ಬರು ಕಾನ್ಸ್‌ಟೇಬಲ್‌ಗಳಿಗೆ ತಮ್ಮ ಲಿಂಗ ಬದಲಾಯಿಸಿಕೊಳ್ಳಲು ಅನುಮತಿ ನೀಡುವುದು ಹೇಗೆ ಎಂಬುದು ಪೊಲೀಸ್​ ಅಧಿಕಾರಿಗಳ ಮಧ್ಯೆ ತಲೆನೋವು ತಂದಿಟ್ಟಿದೆ.

ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಲಿಂಗ ಬದಲಾವಣೆ ಹೊಸ ವಿದ್ಯಮಾನವಲ್ಲವಾದರೂ, ರಾಜ್ಯ ಪೊಲೀಸ್ ಅಧಿಕಾರಿಗಳು ಮೊದಲ ಬಾರಿಗೆ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾನ್ಸ್‌ಟೇಬಲ್‌ಗಳನ್ನು ಮಹಿಳಾ ಪೊಲೀಸರಾಗಿ ನೇಮಕ ಮಾಡಿಕೊಂಡ ನಂತರ ಅವರ ಪುರುಷರಾಗಿ ಲಿಂಗ ಬದಲಾಯಿಸಿಕೊಳ್ಳಲು ಹೇಗೆ ಅನುಮತಿ ನೀಡುತ್ತಾರೆ ಎಂಬ ವಿಚಿತ್ರ ಪ್ರಶ್ನೆಯನ್ನು ಇಲಾಖೆ ಎದುರಿಸುತ್ತಿದೆ.

ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಇಬ್ಬರು ಕಾನ್‌ಸ್ಟೆಬಲ್‌ಗಳು ಲಿಂಗ ಬದಲಾವಣೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ವಿಭಿನ್ನ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಇಬ್ಬರು ಮಹಿಳಾ ಪೊಲೀಸರಿಗೆ ಲಿಂಗ ಬದಲಾವಣೆಗೆ ಅನುಮತಿ ನೀಡಿದರೆ, ಶಸ್ತ್ರಚಿಕಿತ್ಸೆಯ ನಂತರ ಪುರುಷ ಕಾನ್‌ಸ್ಟೆಬಲ್‌ಗಳೆಂದು ಪರಿಗಣಿಸಿದರೆ ಪುರುಷ ಕಾನ್‌ಸ್ಟೆಬಲ್‌ಗಳಿಗೆ ಅಗತ್ಯವಿರುವ ಇತರ ದೈಹಿಕ ಮಾನದಂಡಗಳು ಹೇಗೆ ಹೊಂದಾಣಿಕೆಯಾಗುತ್ತವೆ ಎಂಬುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಎತ್ತರ, ಓಡುವ ಸಾಮರ್ಥ್ಯ ಮತ್ತು ಭುಜ ಬಲದಂತಹ ವಿಭಿನ್ನ ದೈಹಿಕ ಮಾನದಂಡಗಳಿವೆ. ಉತ್ತರ ಪ್ರದೇಶ ಪೊಲೀಸ್‌ ಇಲಾಖೆಯಲ್ಲಿ ಪುರುಷ ಮತ್ತು ಮಹಿಳೆಯರ ನೇಮಕಾತಿ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ. ಮಹಿಳಾ ಮಾನದಂಡಗಳ ಅಡಿಯಲ್ಲಿ ಉದ್ಯೋಗ ಪಡೆದ ನಂತರ ಲಿಂಗವನ್ನು ಬದಲಾಯಿಸುವ ಮಹಿಳಾ ಸಿಬ್ಬಂದಿಯು ಮಾನದಂಡಗಳನ್ನು ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT