ಸಾಂದರ್ಭಿಕ ಚಿತ್ರ 
ದೇಶ

2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆ

ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ನವದೆಹಲಿ: ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಆಯೋಗವು ಈ ವರ್ಷದ ಫೆಬ್ರವರಿಯಿಂದ ಅಂತಿಮ ವರದಿಗಾಗಿ ಕೆಲಸ ಮಾಡುತ್ತಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಏಕಕಾಲಕ್ಕೆ ಚುನಾವಣೆ ಕುರಿತು ಉನ್ನತ ಮಟ್ಟದ ಸಮಿತಿಯ ಮೊದಲ ಸಭೆ ಕಳೆದ ಶನಿವಾರ ನಡೆಯಿತು. ನ್ಯಾಯಮೂರ್ತಿ ಅವಸ್ತಿ ನೇತೃತ್ವದ ಸಮಿತಿಯು ರಾಜಕೀಯ ಪಕ್ಷಗಳು, ಅಧಿಕಾರಿಗಳು, ಶಿಕ್ಷಣ ತಜ್ಞರು ಮತ್ತು ತಜ್ಞರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿತು.

"ಈ ವಿಚಾರದಲ್ಲಿ ಪಕ್ಷಗಳ ನಡುವೆ ಒಮ್ಮತವಿದೆ ಎಂದು ನಾನು ಹೇಳುವುದಿಲ್ಲ" ಎಂದು ಅಧಿಕಾರಿಯೊಬ್ಬರು ಹೇಳಿದರು, ಸರ್ಕಾರವು ಕಾನೂನು ಆಯೋಗದ ವರದಿಯನ್ನು ಅವರ ಪರಿಶೀಲನೆಗಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿಗೆ ಕಳುಹಿಸಬಹುದು ಎಂದು ಹೇಳಿದರು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿಯೊಂದಿಗೆ ಮಾತನಾಡಿದ ಅಧಿಕಾರಿ, ಕಾನೂನು ಸಮಿತಿಯು ಮುಂದಿನ ಐದು ವರ್ಷಗಳಲ್ಲಿ ಏಕಕಾಲದಲ್ಲಿ ಮಾಡಿದ ಚುನಾವಣೆಗಳನ್ನು ಶಿಫಾರಸು ಮಾಡುತ್ತದೆ, ಇದರಿಂದಾಗಿ 2029 ರಲ್ಲಿ ಏಕಕಾಲದಲ್ಲಿ ಚುನಾವಣೆಗೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ.

ಚುನಾವಣೆಯನ್ನು ಏಕಕಾಲದಲ್ಲಿ ಮಾಡಲು, ಪ್ರಕ್ರಿಯೆಯು ಈ ವರ್ಷದಿಂದ ಪ್ರಾರಂಭವಾಗಬೇಕು ಎಂದು ಅಧಿಕಾರಿ ಹೇಳಿದರು. 2024ರಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

2018 ರಲ್ಲಿ ಸಲ್ಲಿಸಿದ ನ್ಯಾಯಮೂರ್ತಿ ಬಿ ಎಸ್ ಚೌಹಾಣ್ ನೇತೃತ್ವದ ಹಿಂದಿನ ಕಾನೂನು ಆಯೋಗದ ಕರಡು ವರದಿಯಿಂದ ಆಯೋಗವು ತನ್ನ ಹೆಚ್ಚಿನ ಶಿಫಾರಸುಗಳನ್ನು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನಾವು ನ್ಯಾಯಮೂರ್ತಿ ಚೌಹಾಣ್ ಸಮಿತಿಯ ವರದಿಯ ಹಲವು ಶಿಫಾರಸುಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಹಿಂದಿನ ಕಾನೂನು ಆಯೋಗದ ವರದಿಯಂತೆಯೇ, ಮುಂದಿನ ಐದು ವರ್ಷಗಳಲ್ಲಿ ಚುನಾವಣೆಗಳನ್ನು ಏಕಕಾಲದಲ್ಲಿ ಮಾಡಲು ನಾವು ಶಿಫಾರಸು ಮಾಡಿದ್ದೇವೆ ಎಂದು ಹೇಳಿದರು. 

ಹಿಂದಿನ ಕಾನೂನು ಆಯೋಗದ ಸಲಹೆಗಳು ಕೆಲವು ರಾಜ್ಯಗಳಲ್ಲಿ ಚುನಾವಣಾ ಸಮಯವನ್ನು ಮುಂದೂಡುವುದು ಒಳಗೊಂಡಿತ್ತು. ಅಂದರೆ ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಮತ್ತು ಲೋಕಸಭೆಗೆ ಚುನಾವಣೆಗಳನ್ನು ಒಟ್ಟಿಗೆ ನಡೆಸಬಹುದು. ಲೋಕಸಭೆ ಚುನಾವಣೆಗೂ ಮುನ್ನ ವಿಧಾನಸಭೆ ಚುನಾವಣೆಗಳು ನಡೆಯಬೇಕಿದ್ದರೆ, ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಲೋಕಸಭೆ ಚುನಾವಣೆಗೆ ಸಿಂಕ್ರೊನೈಸ್ ಮಾಡಲು ಈ ವಿಧಾನಸಭೆಗಳ ಅವಧಿಯನ್ನು ವಿಸ್ತರಿಸಬಹುದು ಎಂದು ಹೇಳಿದೆ.

2019 ರ ಲೋಕಸಭೆ ಚುನಾವಣೆಗೆ ಹಿಂದಿನ ಆಯೋಗವು ಸಲಹೆಗಳನ್ನು ನೀಡಿತ್ತು ಎಂದು ಅಧಿಕಾರಿ ಹೇಳಿದರು. ಸದನ ಮತ್ತು ಅವಿಶ್ವಾಸ ನಿರ್ಣಯ ಇತ್ಯಾದಿಗಳ ಕುರಿತು ಅದರ ಸಲಹೆಗಳನ್ನು ನಾವು ಪರಿಗಣಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

SCROLL FOR NEXT